ಬಂಟ್ವಾಳ

ಶ್ರೀ ಯೋಗನಿಧಿ ಪತಂಜಲಿ ಪ್ರತಿಷ್ಠಾನ ಉದ್ಘಾಟನೆ, ಸನ್ಮಾನ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಶ್ರೀ ಯೋಗನಿಧಿ ಪತಂಜಲಿ ಪ್ರತಿಷ್ಠಾನವನ್ನು ಬಂಟ್ವಾಳ ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಪೊಳಲಿ ರಾಮಕೃಷ್ಣ ತಪೋವನದ ಶ್ರೀ ವಿವೇಕಚೈತ್ಯಾನಂದ ಸ್ವಾಮೀಜಿ ಉದ್ಘಾಟಿಸಿದರು.

ಜಾಹೀರಾತು

ಈ ಸಂದರ್ಭ ಮಾತನಾಡಿದ ಅವರು ಯೋಗದ ಸಾರವನ್ನುತಿಳಿದುಕೊಂಡು ಜೀವನ ಸಾಗಿಸಿದರೆ ನೆಮ್ಮದಿಯನ್ನು ಕಾಣಲು ಸಾಧ್ಯ ಎಂದರು.

ಜಾಹೀರಾತು

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಉಜಿರೆ ಎಸ್.ಡಿ.ಎಂ ಕಾಲೇಜಿನ ಡಾ.ನಂದೀಶ್ ಯೋಗದ ಮತ್ತು ಜೀವನಶೈಲಿ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಹಿರಿಯ ಯೋಗ ತರಬೇತುದಾರ, ಯೋಗಪಟು ಮಂಗಳೂರಿನ ಮೋನಪ್ಪ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ.ಯಲ್ಲಿ 625ರಲ್ಲಿ 624 ಅಂಕ ಗಳಿಸಿದ ಬಂಟ್ವಾಳ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಹೈಸ್ಕೂಲಿನ ವಿದ್ಯಾರ್ಥಿನಿ ಹಾಗೂ ಡಾ. ದಿನೇಶ್ ಕಾಮತ್ ಮತ್ತು ಡಾ.ಅನುರಾಧಾ ಕಾಮತ್ ಪುತ್ರಿ ಅನುಪಮಾ ಕಾಮತ್ ಮತ್ತು 611 ಅಂಕ ಗಳಿಸಿದ ಶಂಭೂರು ಬೊಂಡಾಲ ಜಗನ್ನಾಥ ಸ್ಮಾರಕ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಮತ್ತು ಡಾ. ಸುಬ್ರಹ್ಮಣ್ಯ ಮತ್ತು ಪ್ರತಿಭಾ ದಂಪತಿಯ ಪುತ್ರ ಜಯಗೋವಿಂದ ಅವರನ್ನು ಗೌರವಿಸಲಾಯಿತು. ಯೋಗ ಪ್ರಶಿಕ್ಷಣ ಪಡೆದ ಶಿಕ್ಷಕರನ್ನು ಅಭಿನಂದಿಸಲಾಯಿತು. ಪ್ರತಿಷ್ಠಾನದ ಅಧ್ಯಕ್ಷ ಡಾ.ಶಿವಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಡಾ.ರಘುವೀರ ಅವಧಾನಿ ಪ್ರತಿಷ್ಠಾನದ ಕಾರ್ಯಸ್ವರೂಪ ಕುರಿತು ವಿವರಿಸಿದರು. ಕೋಶಾಧಿಕಾರಿ ಡಾ.ಸುಬ್ರಹ್ಮಣ್ಯ ಭ               ಟ್ ವಂದಿಸಿದರು. ಪ್ರತಿಭಾ, ಪ್ರತಿಮಾ ಮತ್ತು ಗೀತಾ ಪ್ರಾರ್ಥಿಸಿದರು. ಶಿಕ್ಷಕ ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು. ಬಿ.ಸಿ.ರೋಡಿನ ಮಕ್ಕಳ ತಜ್ಞ ವೈದ್ಯ ಡಾ.ಎಂ.ಎಸ್.ಮಹೇಶ್ ಮತ್ತು ಬಳಗದಿಂದ ಸಂಗೀತ ಕಾರ್ಯಕ್ರಮ, ಯೋಗಪಟುಗಳಿಂದ ಯೋಗನೃತ್ಯ ಪ್ರದರ್ಶನಗೊಂಡಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ