ಬಂಟ್ವಾಳ

ಜೇಸಿ ವತಿಯಿಂದ ತರಬೇತಿ, ಪ್ರತಿಭಾ ಪುರಸ್ಕಾರ

ಜೇಸಿಐ ಜೋಡುಮಾರ್ಗ ನೇತ್ರಾವತಿ ವತಿಯಿಂದ ಘಟಕದ ವತಿಯಿಂದ ನಿನ್ನನ್ನು ನೀನು ತಿಳಿ ಎಂಬ ವಿಷಯದ ಬಗ್ಗೆ ತರಬೇತಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಗ್ರಾಮೀಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ರಾತ್ರಿ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.

ಜಾಹೀರಾತು

ವಲಯ ತರಬೇತುದಾರರಾದ ಡಾ| ರಾಘವೇಂದ್ರ ಹೊಳ್ಳ ತರಬೇತಿ ನಡೆಸಿಕೊಟ್ಟರು ಸರಕಾರಿ ಪ್ರೌಢಶಾಲೆಯಲ್ಲಿ ಕಲಿತು ಇತ್ತೀಚೆಗೆ ನಡೆದ 10 ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ಜಯಗೋವಿಂದ (611 ಅಂಕ), ಮಾಣಿಲ ಸರಕಾರಿ ಪ್ರೌಢಶಾಲೆಯ ಅನನ್ಯಾ (600 ಅಂಕ), ಹಾಗೂ ಸಾಲೆತ್ತೂರು ಸರಕಾರಿ ಪ್ರೌಢಶಾಲೆಯ ಸೃಷ್ಟಿ ಕೆ.ಕೆ. (600 ಅಂಕ), ಸಾಧನೆಯನ್ನು ಗುರುತಿಸಿ ಗೌರವಿಸಲಾಯಿತು. ಸಂದರ್ಭ ಜೇಸಿ ಅಧ್ಯಕ್ಷರಾದ ಹರ್ಷರಾಜ್ ಸಿ, ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ, ಜೇಸಿರೆಟ್ ಅಧ್ಯಕ್ಷೆ ಅಮಿತಾ ಹರ್ಷರಾಜ್, ಜೇಜೇಸಿ ಅಧ್ಯಕ್ಷ ರೋನಿತ್ ಬಿ.ಜೆ. ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ