ಬಂಟ್ವಾಳ

ಸರಕು ಸಾಗಾಟ ವಾಹನದಲ್ಲಿ ಕೂಲಿ ಕಾರ್ಮಿಕರ ಸಾಗಾಟ – ಪೊಲೀಸರ ಎಚ್ಚರಿಕೆ

ಸರಕು ಸಾಗಾಟ ವಾಹನಗಳಲ್ಲಿ ಕೂಲಿ ಕಾರ್ಮಿಕರು ಮತ್ತು ಇತರ ಪ್ರಯಾಣಿಕರನ್ನು ಸಾಗಿಸುವುದರ ವಿರುದ್ಧ ಬಂಟ್ವಾಳ ಟ್ರಾಫಿಕ್ ಪೊಲೀಸರು ಸುರಕ್ಷತೆಯ ದೃಷ್ಟಿಯಿಂದ ಎಚ್ಚರಿಕೆಯ ಸೂಚನೆಗಳನ್ನು ನೀಡಿದ್ದಾರೆ.

ಜಾಹೀರಾತು

ಇದರಿಂದ ಯಾವುದೇ ಅಪಾಯದ ಸನ್ನಿವೇಶಕ್ಕೆ ಕಾರಣವಾಗಬಾರದು. ಕಟ್ಟಡ ನಿರ್ಮಾಣ ಗುತ್ತಿಗೆದಾರರು ತಮ್ಮ ಕಾರ್ಮಿಕರನ್ನು ಯಾವುದೇ ಕಾರಣಕ್ಕೂ ಲಾರಿಗಳ ಅಥವಾ ಟಿಪ್ಪರ್‌ಗಳಲ್ಲಿ ಸಾಗಾಟ ಮಾಡಬಾರದು. ಲಾರಿಯ ಕ್ಯಾಬಿನ್‌ನಲ್ಲಿ ಕುಳಿತುಕೊಂಡು ಪ್ರಯಾಣಿಸಲು ಅನುಮತಿ ಇರುವ ಸಂಖ್ಯೆಯಷ್ಟೇ ಜನರು ಪ್ರಯಾಣ ಮಾಡಬೇಕು ಎಂದು ಹೆದ್ದಾರಿಯಲ್ಲಿ ಹಾಗೂ ಸರಕು ಸಾಗಾಟ ವಾಹನಗಳಿರುವ ಕೇಂದ್ರಗಳಲ್ಲಿ ಮಾಹಿತಿಗಳನ್ನು ನೀಡಿದರು.

ಕಟ್ಟಡ ನಿರ್ಮಾಣ ಗುತ್ತಿಗೆದಾರರು ಸರಕು ಸಾಗಾಟ ವಾಹನಗಳಲ್ಲಿ ಕಾರ್ಮಿಕರನ್ನು ಸಾಗಾಟ ನಡೆಸುತ್ತಿರುವ ಪದ್ಧತಿಯನ್ನು ಅನುಸರಿಸುತ್ತಿದ್ದಾರೆ. ಸರಕು ಸಾಗಾಟ ವಾಹನಗಳಲ್ಲಿ ಕಾರ್ಮಿಕರನ್ನು ಅಥವಾ ಜನರನ್ನು ಸಾಗಾಟ ಮಾಡುವುದು ಪರವಾನಿಗೆ ನಿಯಮಕ್ಕೆ ವಿರುದ್ಧವಾಗಿದೆ. ಕಾರ್ಮಿಕರನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಗಾಟ ಮಾಡಲು ಇತರ ವಾಹನಗಳನ್ನು ಬಳಕೆ ಮಾಡಬೇಕು. ಸರಕು ಸಾಗಾಟ ವಾಹನಗಳಲ್ಲಿ ಜನರನ್ನು ಸಾಗಾಟ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.