ಜಿಲ್ಲಾ ಸುದ್ದಿ

ಉಪನ್ಯಾಸಕನ ಮರ್ಡರ್ – ಇಬ್ಬರು ಆರೋಪಿಗಳು ಅರೆಸ್ಟ್

ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಗ್ಗಿನ  ಅವಧಿಯಲ್ಲಿ ಬೆಳ್ತಂಗಡಿ ತಾಲೂಕು ಮುಂಡೂರು ಗ್ರಾಮದ ಕೋಟಿಕಟ್ಟೆ ಎಂಬಲ್ಲಿ ಉಪನ್ಯಾಸಕ ವಿಕ್ರಮ್ ಜೈನ್ (40) ಎಂಬವರನ್ನು ಬರ್ಬರವಾಗಿ ಕಡಿದು ಕೊಂದ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಜಾಹೀರಾತು

ಆರೋಪಿಗಳಾದ  ಉಜ್ರೆಬೈಲು ಮನೆ, ಮುಂಡೂರು ಗ್ರಾಮದ ನಾಗೇಶ್ ಪೂಜಾರಿ (32), ಪರನೀರು ಮನೆ, ಮುಂಡೂರು ಗ್ರಾಮದ  ಡೀಕಯ್ಯ ನಲ್ಕೆ (39) ಅವರನ್ನು ರೈಲಿನಲ್ಲಿ ಮುಂಬಯಿಗೆ ಪರಾರಿಯಾಗುತ್ತಿರುವ ವೇಳೆ  ಬೈಂದೂರು ರೈಲ್ವೇ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಯಿತು.

ಇಬ್ಬರಿಗೂ ಆರೋಪಿಯೊಂದಿಗೆ ಬೇರೆ ಬೇರೆ ಕಾರಣಗಳಿಂದ ದ್ವೇಷ ಇತ್ತು. ಸಮಾನವಾದ ಉದ್ದೇಶದಿಂದ ರಾತ್ರಿ ಬೆಳ್ತಂಗಡಿ ತಾಲೂಕಿನ ಮುಂಡೂರು ಗ್ರಾಮದ ಕೋಟಿಕಟ್ಟೆ ಎಂಬಲ್ಲಿಗೆ ವಿಕ್ರಮ್‌ ಜೈನ್‌  ಅವರನ್ನು  ಬರಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ವಿಕ್ರಮ್‌ ಜೈನ್‌ ರವರು ಸ್ಥಳಕ್ಕೆ ತೆರಳಿದ ಸಂದರ್ಭ, ಸಮಯದಲ್ಲಿ  ಆರೋಪಿಗಳು ಚಾಕು ಹಾಗೂ ತಲವಾರುಗಳಿಂದ ಚುಚ್ಚಿ ಕಡಿದು ಕೊಲೆ ಮಾಡಿರುವುದಾಗಿ ಪೊಲೀಸರು ಪತ್ತೆಹಚ್ಚಿದ್ದು,  ತನಿಖೆ ಮುಂದುವರೆದಿರುತ್ತದೆ.

ಐಟಿಐ ಉಪನ್ಯಾಸಕನ ಮಾರಕಾಸ್ತ್ರಗಳಿಂದ ಇರಿದು ಕೊಲೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ