ಬಿ.ಸಿ.ರೋಡ್ ಹೃದಯಭಾಗದಲ್ಲೇ ನಿಲ್ಲುವ ಮಳೆನೀರು: ಕಾರು, ವ್ಯಾನು ಚಾಲಕರ ಪ್ರತಿಭಟನೆ

ಬಿ.ಸಿ.ರೋಡಿನ ಹೃದಯ ಭಾಗವಾದ ಸ್ಟೇಟ್ ಬ್ಯಾಂಕ್ ಮುಂಭಾಗ ನೀರು ನಿಲ್ಲುವುದು ಹಾಗೂ ಚರಂಡಿ ದುರಸ್ತಿಗೊಳಿಸದೇ ಇರುವುದನ್ನು ವಿರೋಧಿಸಿ ದ.ಕ.ಜಿಲ್ಲಾ ಟೂರಿಸ್ಟ್ ಕಾರು ಮತ್ತು ವ್ಯಾನು ಚಾಲಕರ ಸಂಘದ ವತಿಯಿಂದ ಶನಿವಾರ ಬಿ.ಸಿ.ರೋಡ್ ಸ್ಟೇಟ್ ಬ್ಯಾಂಕ್ ಎದುರು ಪ್ರತಿಭಟನೆ ಧರಣಿ ನಡೆಯಿತು.

ಜಾಹೀರಾತು

ಈ ಸಂದರ್ಭ ಮಾತನಾಡಿದ ಪ್ರತಿಭಟನಾಕಾರರು, ಬಿ.ಸಿ.ರೋಡ್ ಜನನಿಬಿಡ ಪ್ರದೇಶವಾಗಿದ್ದು, ಇದು ತಾಲೂಕಿನ ಕೇಂದ್ರ ಸ್ಥಳವೂ ಆಗಿದೆ. ತಾಲೂಕು ದಂಡಾಧಿಕಾರಿ ಕಚೇರಿ, ನ್ಯಾಯಾಲಯ, ಪೊಲೀಸ್ ಠಾಣೆ, ತಾಲೂಕು ಪಂಚಾಯತ್ ಕೇರಿ, ವಾಣಿಜ್ಯ ಬ್ಯಾಂಕುಗಳು ಇದ್ದು, ಮೂಲಸೌಕರ್ಯವಾದ ಸುಗಮ ಸಂಚಾರಕ್ಕೆ ರಸ್ತೆಯಾಗಲೀ, ಮಳೆ ನೀರು ಹರಿದುಹೋಗಲು ಸರಿಯಾದ ಒಳಚರಂಡಿ ವ್ಯವಸ್ಥೆಯಾಗಲೀ ಇಲ್ಲ. ಪ್ರಯಾಣಿಕರಿಗೆ ಅನುಕೂಲವಾಗುವ ಬಸ್ ನಿಲ್ದಾಣ, ವಾಹನಗಳ ಪಾರ್ಕಿಂಗ್ ಗೆ ಸರಿಯಾದ ಸ್ಥಳಗಳೂ ಇಲ್ಲಿಲ್ಲ. ಸ್ವಚ್ಛ ಭಾರತ ನೆಪದಲ್ಲಿ ನಾಗರಿಕರಿಂದ ಅಧಿಕ ತೆರಿಗೆ ವಸೂಲು ಮಾಡುವ ಪುರಸಭೆ, ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವಲ್ಲಿ ವಿಫಲವಾಗಿದೆ ಎಂದರು.

ಬಿ.ಸಿ.ರೋಡ್ ಸ್ಟೇಟ್ ಬ್ಯಾಂಕ್ ಎದುರಿನಲ್ಲಿರುವ ಟೂರಿಸ್ಟ್ ಕಾರು ಪಾರ್ಕಿಂಗ್ ಪಕ್ಕದಲ್ಲಿರುವ ಚರಂಡಿ ದುರಸ್ತಿಗೊಳಿಸಲು ಸಂಘ ಹಲವಾರು ಬಾರಿ ಪುರಸಭೆ ಮುಖ್ಯಾಧಿಕಾರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ತಹಶೀಲ್ದಾರ್ ಅವರಿಗೆ ದೂರು ನೀಡಿದರೂ ಉಪಯೋಗಶೂನ್ಯ. ಹೀಗಾಗಿ ಚಾಲಕರ ಸಂಘ ಪ್ರತಿಭಟನೆಯನ್ನು ನಡೆಸಬೇಕಾಯಿತು ಎಂದರು.

ಬಿ.ಸಿ.ರೋಡಿನಲ್ಲಿ ಸಂಚರಿಸುವ ನಾಗರಿಕರಿಗೆ ಇಲ್ಲಿ ಯಾವುದೇ ಸೌಕರ್ಯಗಳೂ ಇಲ್ಲ. ತೆರೆದ ಚರಂಡಿ, ಒಳ ಚರಂಡಿ, ಸರ್ವೀಸ್ ರೋಡ್, ವಾಹನ ನಿಲುಗಡೆ, ಪಾದಾಚಾರಿಗಳ ಸಂಚಾರ ವ್ಯವಸ್ಥೆ ಈ ಪೇಟೆಯಲ್ಲಿಲ್ಲ. ಪುರಸಭೆ, ತಾಲೂಕಾಡಳಿತದಿಂದ ಸಂಪೂರ್ಣ ನಿರ್ಲಕ್ಷ್ಯತೆಗೆ ಒಳಗಾದ ಪೇಟೆಯನ್ನು ವ್ಯವಸ್ಥಿತಗೊಳಿಸಲು ಜಿಲ್ಲಾಡಳಿತ ತಕ್ಷಣ ಸ್ಪಂದಿಸಬೇಕು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು, ಸಂಘದ ಅಧ್ಯಕ್ಷ ವಿಠಲ ರೈ ಮಧ್ವಗುತ್ತು, ಸಂಚಾಲಕ ಕೃಷ್ಣ ಅಲ್ಲಿಪಾದೆ, ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಕುಲಾಲ್ ದೈಪಲ, ಪ್ರಮುಖರಾದ ಪ್ರಭಾಕರ ದೈವಗುಡ್ಡೆ, ಕೆ.ಎಚ್.ಅಬೂಬಕ್ಕರ್ ಉಪಸ್ಥಿತರಿದ್ದರು.

ಜಾಹೀರಾತು

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿ.ಸಿ.ರೋಡ್ ಹೃದಯಭಾಗದಲ್ಲೇ ನಿಲ್ಲುವ ಮಳೆನೀರು: ಕಾರು, ವ್ಯಾನು ಚಾಲಕರ ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*