ಬಂಟ್ವಾಳ

ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಸೀಟ್ ಲಿಮಿಟ್: ಸರಕಾರಿ ಶಾಲೆ ಉಳಿಸಿ ಸಮಿತಿ ಆಕ್ರೋಶ

ರಾಜ್ಯದ ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಕೇವಲ 30 ಮಕ್ಕಳಿಗೆ ಮಾತ್ರ ಆಂಗ್ಲ ಮಾಧ್ಯಮದಲ್ಲಿ ಕಲಿಕೆಗೆ ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ದಿಢೀರ್ ಆದೇಶದ ವಿರುದ್ಧ ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿಯ ರಾಜ್ಯಾಧ್ಯಕ್ಷ ಪ್ರಕಾಶ್‌ ಅಂಚನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾಹೀರಾತು

ಎಷ್ಟೇ ಮಕ್ಕಳೂ ಬಂದರೂ ಒಂದನೇ ತರಗತಿಗೆ ಪ್ರವೇಶ ನೀಡುವಂತೆ ಆದೇಶ ನೀಡಿದ್ದ ಸರ್ಕಾರ ಇದೀಗ ಖಾಸಗಿ ಲಾಭಿಗೆ ಮಣಿದು 30 ಮಕ್ಕಳಿಗೆ ಮಾತ್ರ ಅವಕಾಶ ನೀಡಬೇಕೆಂದಿರುವ ಧೋರಣೆ ಸರಿಯಲ್ಲ ಸರಕಾರ ಈ ತೀರ್ಮಾನ ಅವೈಜ್ಞಾನಿಕವಾಗಿದೆ. ವಿದ್ಯಾರ್ಥಿಗಳ ಪೋಷಕರ ಆಸೆಗೆ ತಣ್ಣೀರು ಎರಚಿದಂತಿದೆ. ಅಲ್ಲದೆ ಸರಕಾರಿ ಶಾಲೆಗಳ ಅಸ್ಥಿತ್ವಕ್ಕೂ ಪಟ್ಟು ನೀಡುವಂತಿದೆ. ಸರಕಾರ ತಕ್ಷಣ ಈ ಆದೇಶವನ್ನು ಹಿಂಪಡೆಯಬೇಕು, ಒಂದನೇ ತರಗತಿಗೆ ದಾಖಲಾತಿ ಮಾಡಿಕೊಂಡಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆಯಲು ಅವಕಾಶ ಕೊಡಬೇಕು ತಪ್ಪಿದ್ದಲ್ಲಿ ರಾಜ್ಯದ್ಯಂತ ಪ್ರತಿಭಟನೆ ನಡೆಸುವುದಾಗಿ ಪ್ರಕಾಶ್ ಅಂಚನ್ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಆಂಗ್ಲ ಮಾಧ್ಯಮದಲ್ಲಿ ಭೋದನೆಗೆ ಅವಕಾಶ ನೀಡಿದ ಬಳಿಕ ಅಂತಹ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಗಣನೀಯವಾಗಿ ಏರಿದೆ. ಪ್ರತೀ ಶಾಲೆಗಳಲ್ಲೂ ಒಂದನೇ ತರಗತಿಗೆ ಸರಾಸರಿ 50 ರಿಂದ 100ಕ್ಕಿಂತಲೂ ಅಧಿಕ ಮಂದಿ ಸೇರ್ಪಡೆಗೊಂಡಿದ್ದಾರೆ. ಇದೀಗ ಸೇರ್ಪಡೆ ಪ್ರಕ್ರಿಯೆಗಳು ಎಲ್ಲಾ ಮುಗಿದ ಬಳಿಕ ಆಂಗ್ಲ ಮಾಧ್ಯಮ ಭೋಧನೆಗೆ ಕೇವಲ 30 ಮಕ್ಕಳಿಗೆ ಮಾತ್ರ ಅವಕಾಶ ಎನ್ನುವ ಆದೇಶವನ್ನು ಜೂನ್ 1 ರಂದು ನೀಡಿ ವಿದ್ಯಾರ್ಥಿಗಳ ಪೋಷಕರು, ಶಿಕ್ಷಕರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಗೊಂದಲಕ್ಕೀಡಾಗುವಂತೆ ಮಾಡಿದೆ. 30 ಮಕ್ಕಳಿಗೆ ಮಾತ್ರ ಆಂಗ್ಲ ಮಾಧ್ಯಮ ಕಲಿಕೆಗೆ ಅವಕಾಶ ನೀಡಿದರೆ ಆಂಗ್ಲ ಮಾದ್ಯಮದಲ್ಲಿ ಕಲಿಯಬೇಕೆನ್ನುವ ಉದ್ದೇಶದಿಂದ ಖಾಸಗಿ ಶಾಲೆಗಳಿಗೆ ಹೋಗದೆ ಸರಕಾರಿ ಶಾಲೆಯಲ್ಲಿಯೇ ದಾಖಲಾತಿ ಮಾಡಿಕೊಂಡಿರುವ ಉಳಿದ ವಿದ್ಯಾರ್ಥಿಗಳ ಭವಿಷ್ಯದ ಕತೆಯೇನು ಎಂದು ಪ್ರಶ್ನಿಸಿರುವ ಅವರು, ಸರಕಾರ ಬಡ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ತಿಳಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ