ವಾಮದಪದವು

ಸಿದ್ಧಕಟ್ಟೆ: ಜೀವನ ಕೌಶಲ್ಯ ತರಬೇತಿ

ರೋಟರಿ ಕ್ಲಬ್ ಬಂಟ್ವಾಳ, ಇಂಟರಾಕ್ಟ್ ಕ್ಲಬ್ ಪ್ರೌಢಶಾಲಾ ವಿಭಾಗ ಸಿದ್ದಕಟ್ಟೆ ಮತ್ತು ಲೈಫ್ ಸ್ಕಿಲ್ ಟ್ರೈನಿಂಗ್ ಸೆಂಟರ್ ಬಿ.ಸಿ.ರೋಡು ಸಹಯೋಗದಲ್ಲಿ ಸಿದ್ದಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಡಶಾಲಾ ವಿಭಾಗದಲ್ಲಿ ಜೀವನ ಕೌಶಲ್ಯ ತರಬೇತಿ ಕಾರ್ಯಗಾರ” ಕ್ಕೆ ಸೋಮವಾರ ಚಾಲನೆ ದೊರೆಯಿತು.

ಜಾಹೀರಾತು

ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷೆ ಶಿವಾನಿ ಬಾಳಿಗಾ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಪಂಚಾಯತು ಸದಸ್ಯ ಪ್ರಭಾಕರ ಪ್ರಭು ಮುಖ್ಯ ಅತಿಥಿಯಾಗಿ ಮಾತನಾಡಿ ಪ್ರತಿಯೊಬ್ಬರೂ ತಮ್ಮಲ್ಲಿರುವ ದೌರ್ಬಲ್ಯಗಳನ್ನು ಗುರುತಿಸಿ ಅದನ್ನು ಸಾಮರ್ಥ್ಯಗಳನ್ನಾಗಿ ಪರಿವರ್ತಿಸಿಕೊಂಡಾಗ ಬದುಕಿನ ಹಾದಿ ಸುಗಮವಾಗುತ್ತದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರಗಳು ಶಾಲೆಗಳಲ್ಲಿ ನಡೆಯಬೇಕಾದ ಅನಿವಾರ್ಯತೆ ಇದೆ ಎಂದು ಅವರು ಹೇಳಿದರು.

ಸಂಗಬೆಟ್ಟು ಗ್ರಾಮ ಪಂಚಾಯತು ಅಧ್ಯಕ್ಷೆ ಗುಲಾಬಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತು ಸದಸ್ಯರಾದ ಶ್ರೀಧರ್ ಎಸ್.ಪಿ., ಸುಲೋಚನಾ, ಶಾಲಾ ಉಪಪ್ರಾಂಶುಪಾಲ ರಮಾನಂದ, ಲೈಫ್ ಸ್ಕಿಲ್ ಟ್ರೈನಿಂಗ್ ಸೆಂಟರ್ ನಿರ್ದೇಶಕ ಗೋಪಾಲ ಅಂಚನ್ , ರೋಟರಿ ಕ್ಲಬ್ ಕಾರ್ಯದರ್ಶಿ ಸ್ಮಿತಾ ಉಪಸ್ಥಿತರಿದ್ದರು. ಶಿಕ್ಷಕಿ ಮಾರ್ಗರೇಟ್ ಪಿಂಟೊ ಸ್ವಾಗತಿಸಿದರು. ಶಿಕ್ಷಕ ಮಹೇಶ್ ಕರ್ಕೇರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸ್ವ ಅರಿವು, ಸಂವಹನ ಕೌಶಲ್ಯ, ನಾಯಕತ್ವ, ಮಾತುಗಾರಿಕೆ, ವ್ಯಕ್ತಿತ್ವ ವಿಕಸನ, ವೃತ್ತಿ ಆಸಕ್ತಿ, ಸಮಾಜವನ್ನು ಅರ್ಥ ಮಾಡುವಿಕೆ, ಕಲಿಕಾ ಕೌಶಲ್ಯ ಮೊದಲಾದ ವಿಷಯಗಳಲ್ಲಿ ತರಬೇತಿ ನಡೆಯಿತು. ಗೋಪಾಲ ಅಂಚನ್, ಉದಯ ಕುಮಾರ್ ಜ್ಯೋತಿಗುಡ್ಡೆ, ಪ್ರತಾಪ್ ಚೆಂಡ್ತಿಮಾರ್, ಪ್ರತಿಮಾ ಬಿ.ಸಿ.ರೋಡು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts