ಬಂಟ್ವಾಳ

ದೇವಸ್ಥಾನ ಹಿಂಬದಿ ಔಷಧೀಯ ಸಸ್ಯ ನೆಟ್ಟು ಪರಿಸರ ದಿನಾಚರಣೆ

ಮಾಲಿನ್ಯ ತಡೆಗಟ್ಟುವುದಷ್ಟೇ ಅಲ್ಲ, ಔಷಧೀಯ ಸಸ್ಯಗಳನ್ನು ನೆಡುವುದರ ಮೂಲಕ ಆರೋಗ್ಯ ಜಾಗೃತಿಯನ್ನೂ ನಡೆಸುವ ಹಿನ್ನೆಲೆಯಲ್ಲಿ ಜೋಡುಮಾರ್ಗ ನೇತ್ರಾವತಿ ಜೇಸಿ ವತಿಯಿಂದ ಜೂನ್.5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಬಿ.ಸಿ.ರೋಡಿನ ಚಂಡಿಕಾಪರಮೇಶ್ವರಿ ದೇವಸ್ಥಾನದ ಹಿಂಬದಿ ನಡೆಸಲಾಯಿತು.

ಜಾಹೀರಾತು

ಜನರಲ್ಲಿ ಮರ ಗಿಡಗಳನ್ನು ಬೆಳೆಸುವದರ ಬಗ್ಗೆ ಜಾಗೃತಿ ಮತ್ತು ಜಾಗತಿಕ ತಾಪಮಾನ, ಮಾಲಿನ್ಯ ತಡೆಗಟ್ಟಲು ಪರಿಸರ ದಿನಾಚರಣೆಯನ್ನು ಆಚರಿಸುವುದು ಒಂದು ಉತ್ತಮ ಮಾರ್ಗಹಸಿರು ಉಳಿಸಿ ಬೆಳೆಸುವುದರ ಮೂಲಕ ನಾವು ನಮ್ಮ ಮುಂದಿನ ಪೀಳಿಗೆಯವರು ಒಂದು ಉತ್ತಮ ವಾತಾವರಣದಲ್ಲಿ ಬದುಕಲು ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ಕಾರ್ಯಕ್ರಮವನ್ನು ಗಿಡ ನೆಟ್ಟು ಉದ್ಘಾಟಿಸಿದ ಎಸ್. ವಿ.ಎಸ್. ಕಾಲೇಜಿನ ಪ್ರಾಂಶುಪಾಲ ಪಾಂಡುರಂಗ ನಾಯಕ್ ಹೇಳಿದರು.

ಈ ಸಂದರ್ಭ ಮಾವು, ಚಿಕ್ಕು, ಬಿಲ್ವಪತ್ರೆ ಗಿಡಗಳನ್ನು ನೆಟ್ಟು ಅದಕ್ಕೆ ನೀರೆಯಲಾಯಿತು. ಕಾಟಾಚಾರಕ್ಕೆ ಗಿಡನೆಡುವುದರ ಬದಲು ಅವುಗಳನ್ನು ಪೋಷಿಸಿ ಬೆಳೆಸಿ ಅವುಗಳಿಗೆ ಪ್ರತೀ ವರ್ಷ ಹುಟ್ಟು ಹಬ್ಬ ಆಚರಿಸುವುದರ ಮೂಲಕ ಪರಿಸರ ಕಾಳಜಿ ತೋರಿಸಿ ಇತರರಿಗೆ ಮಾದರಿಯಾಗಬೇಕೆಂದು ಸಂದರ್ಭದಲ್ಲಿ ಉಪಸ್ಥಿತರಿದ್ದ ಜೇಸಿ ಘಟಕದ ಪೂರ್ವಾಧ್ಯಕ್ಷ ರಾಮಚಂದ್ರ ರಾವ್ ತಿಳಿಸಿದರು.

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ, ಜೇಸಿ ಅಧ್ಯಕ್ಷ ಹರ್ಷರಾಜ್ ಸಿ, ಜೇಸಿರೆಟ್ ಅಧ್ಯಕ್ಷೆ ಅಮಿತಾ ಹರ್ಷರಾಜ್, ಉಪಾಧ್ಯಕ್ಷರಾದ ಜಯರಾಜ್ ಬಂಗೇರ, ಧೀರಜ್ ಹೆಚ್, ನಿರ್ದೇಶಕರಾದ ಸುಧಾಕರ್ ವೈ, ಖಜಾಂಚಿ ಹರಿಶ್ಚಂದ್ರ ಆಳ್ವ, ಸದಸ್ಯರುಗಳಾದ ಶ್ರೀನಿಧಿ ಭಟ್, ಕೃಷ್ಣರಾಜ್ ರಾವ್, ಸುಬ್ರಹ್ಮಣ್ಯ ರಾವ್, ಜೇಜೇಸಿಗಳಾದ ವರುಣ್ ರಾಜ್, ಆದಿತ್ಯ, ತನಿಷ್ಕಾ ಉಪಸ್ಥಿತರಿದ್ದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ