ಬಂಟ್ವಾಳ

ಪ್ಲಾಸ್ಟಿಕ್ ಬಳಕೆ ನಿಯಂತ್ರಣ ಇಂದಿನ ಅನಿವಾರ್ಯತೆ: ರಾಜಮಣಿ ರಾಮಕುಂಜ

ಬುದ್ಧಿಜೀವಿ ಎನಿಸಿಕೊಂಡ ಮಾನವ ವಿವೇಚನಾಶೂನ್ಯನಾಗಿರುವುದರಿಂದ ಇಂದು ಪರಿಸರದ ವಿನಾಶವಾಗುತ್ತಿದೆ. ಸ್ವಚ್ಛ ಗಾಳಿ ಸಮೃದ್ಧ ಪರಿಸರಕ್ಕಾಗಿ ಗಿಡ ಮರಗಳನ್ನು ನೆಟ್ಟು ಬೆಳೆಸುದಲ್ಲದೆ ಪ್ಲಾಸ್ಟಿಕ್ ಬಳಕೆ ನಿಯಂತ್ರಣ ಅನಿವಾರ್ಯ ಎಂದು ಪರಿಸರ ಪ್ರೇಮಿ, ನಿವೃತ್ತ ಉಪನ್ಯಾಸಕ ರಾಜಮಣಿ ರಾಮಕುಂಜ ಹೇಳಿದರು.

ಜಾಹೀರಾತು

ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇಲ್ಲಿನ ಚಿಗುರು ಪರಿಸರ ಸಂಘವು ಜೋಡುಮಾರ್ಗ ನೇತ್ರಾವತಿ ಜ್ಯೂನಿಯರ್ ಜೇಸಿ ಹಾಗು ಇಂಟಾರ್ಯಾಕ್ಟ್ ಕ್ಲಬ್  ಬಂಟ್ವಾಳ ಟೌನ್ ಆಶ್ರಯದಲ್ಲಿ ನಡೆಸಿದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ದಲ್ಲಿ ಹಣ್ಣು ಮತ್ತು ಔಷಧೀಯ ಸಸ್ಯ ನೆಟ್ಟು ವಾಯುಪ್ರದೂಷಣೆ ಮತ್ತು ಕಸ ನಿರ್ವಹಣೆ ಬಗ್ಗೆ ಮಾಹಿತಿ ನೀಡುತ್ತಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಶಿಕ್ಷಕರಾದ ಸದಾಶಿವ ನಾಯಕ್ ವಹಿಸಿದ್ದರು.

ಜೇಸಿ ಉಪಾಧ್ಯಕ್ಷ ಹರಿಪ್ರಸಾದ್ ಕುಲಾಲ್, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಚಿನ್ನಪ್ಪ ಜಾಲ್ಸೂರು, ಶಿಕ್ಷಕರಾದ ವರಮಹಾಲಕ್ಷ್ಮೀ, ಪ್ರಕಾಶ್ ಸಜಿಪ, ಹರೀಶ ದೇವಂದಬೆಟ್ಟು, ಜೇಜೆಸಿ ಅಧ್ಯಕ್ಷ ರೋನಿತ್ ಬಿ.ಜಿ, ಇಂಟಾರಾಕ್ಟ್ ಅಧ್ಯಕ್ಷೆ ಶ್ರೀವಿದ್ಯಾ, ಪರಿಸರ ಸಂಘದ ಅಧ್ಯಕ್ಷ ನಮನ್ ಕುಮಾರ್ ಉಪಸ್ಥಿತರಿದ್ದರು.

ವಿಜ್ಞಾನ ಶಿಕ್ಷಕರಾದ ಭಾರತಿ ಹರೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಾದ ವಿಶ್ಮಿತಾ ವೇಗಸ್ ಸ್ವಾಗತಿಸಿ, ಪ್ರತೀಕ್ಷಾ ವಂದಿಸಿದರು. ಸುರಕ್ಷಾ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ