ವಾಮದಪದವು

ಸಿದ್ಧಕಟ್ಟೆ ಹೈಸ್ಕೂಲಿನಲ್ಲಿ ವಿದ್ಯಾರ್ಥಿ ಸಂಸತ್ ರಚನೆ

ಪ್ರಜಾಪ್ರಭುತ್ವದ ಆಶಯವನ್ನು ಸಾಕ್ಷೀಕರಿಸಲು ಸಿದ್ಧಕಟ್ಟೆ ಸರಕಾರಿ ಹೈಸ್ಕೂಲಿನಲ್ಲಿ ವಿದ್ಯಾರ್ಥಿ ಸಂಸತ್ ರಚನೆಯಾಯಿತು.

ಜಾಹೀರಾತು

ಈ ಸಂದರ್ಭ ಚುನಾವಣಾ ಪ್ರಕ್ರಿಯೆಗಳು ನಡೆದವು. ಶಾಲಾ ಸಂಸತ್ತಿನ ಚುನಾವಣೆಯಲ್ಲಿ ನಾಯಕ ಸ್ಥಾನಕ್ಕೆ ೩, ಕಾರ್ಯದರ್ಶಿ ಸ್ಥಾನಕ್ಕೆ ೩ ಮತ್ತು ಕ್ರೀಡಾಕಾರ್ಯದರ್ಶಿ ಸ್ಥಾನಕ್ಕೆ ನಾಲ್ವರು ಸ್ಪರ್ಧಿಸಿದ ಕಾರಣ ಚುನಾವಣೆ ನಡೆಯಿತು. ಮತದಾನದ ಬಳಿಕ ಮತ ಎಣಿಕೆ ಪ್ರಕ್ರಿಯೆ ಕೈಗೊಳ್ಳಲಾಗಿ ಶಾಲಾ ನಾಯಕನಾಗಿ ೧೦ನೇ ತರಗತಿಯ ಪ್ರಣೀಶ್, ಉಪನಾಯಕನಾಗಿ ೯ನೇ ತರಗತಿಯ ಅಶ್ವಿನಿ.ಎ.ಡಿ, ಕಾರ್ಯದರ್ಶಿಯಾಗಿ ೯ನೇ ತರಗತಿಯ ಸ್ವಸ್ತಿಕ, ಕ್ರೀಡಾಕಾರ್ಯದರ್ಶಿಯಾಗಿ ೯ನೇ ತರಗತಿಯ ನಿರತ್ ಆಯ್ಕೆಯಾದರು. ವಿದ್ಯಾರ್ಥಿ ಸಂಸತ್ತಿನ ವಿವಿಧ ಸಚಿವರುಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಗೃಹಮಂತ್ರಿಯಾಗಿ ಜಯಂತ್, ಅರಣ್ಯ ಮತ್ತು ಪರಿಸರ ಸಚಿವರಾಗಿ ಮಿಥುನ್‌ಚಂದ್ರ, ಶಿಕ್ಷಣ ಮತ್ತು ಶಿಸ್ತು ಮಂತ್ರಿ ಪ್ರಾಪ್ತಿ, ನೀರಾವರಿ ಮಂತ್ರಿ ಆನಂದ, ಸ್ವಚ್ಛತಾ ಮತ್ತು ನೈರ್ಮಲ್ಯ ಮಂತ್ರಿಯಾಗಿ ರಕ್ಷಿತ್, ಆರೋಗ್ಯ ಮಂತ್ರಿಯಾಗಿ ಹರ್ಷ, ವಿರೋಧ ಪಕ್ಷದ ನಾಯಕನಾಗಿ ಜಿತೇಶ್, ಸಭಾಧ್ಯಕ್ಷರಾಗಿ ಅನುಷ್ ಆಯ್ಕೆಯಾದರು. ಮಕ್ಕಳ ಹಕ್ಕು ಮತ್ತು ಮಕ್ಕಳ ಸುರಕ್ಷಾ ಸಮಿತಿಯ ಕಾರ್ಯದರ್ಶಿಯಾಗಿ ಮೋಕ್ಷ, ಭಾಷಾ ಸಂಘದ ಅಧ್ಯಕ್ಷರಾಗಿ ರಮೀಜ್, ಸಾಂಸ್ಕೃತಿಕ ಸಂಘದ ಅಧ್ಯಕ್ಷರಾಗಿ ಪೂರ್ಣಿಮಾ, ಕ್ರೀಡಾ ಸಂಘದ ಅಧ್ಯಕ್ಷರಾಗಿ ಭರತ್ ಗುರುರಾಜ್, ಇಂಟರ್‍ಯಾಕ್ಟ್ ಕ್ಲಬ್‌ನ ಅಧ್ಯಕ್ಷರಾಗಿ ಪ್ರಣೀಶ್, ಮತದಾರರ ಕ್ಲಬ್‌ನ ಅಧ್ಯಕ್ಷರಾಗಿ ಕೀರ್ತನ್, ಪ್ರೇರಣಾ ಕ್ಲಬ್‌ನ ಅಧ್ಯಕ್ಷರಾಗಿ ಸೌಮ್ಯಲತಾ ಆಯ್ಕೆಯಾದರು.

ಸಂಸತ್ತಿನ ಚುನಾವಣೆಯ ಅಧ್ಯಕ್ಷಾಧಿಕಾರಿಯಾಗಿ ಗಣಿತ ಶಿಕ್ಷಕಿ ಸುರೇಖಾ ಯು.ಎನ್. ಮತ್ತು ಮತಗಟ್ಟೆ ಅಧಿಕಾರಿಗಳಾಗಿ ಸಹಶಿಕ್ಷಕಿಯರಾದ ಸ್ಮಿತಾ, ಜೋಸ್ಲಿನ್ ಲವೀನಾ ಸಿಕ್ವೇರಾ, ಪೂರ್ಣಿಮಾ, ಅಮೀನಾ ಶೇಖ್, ಸ್ವಾತಿ ಕಾರ್ಯನಿರ್ವಹಿಸಿದರು. ಮುಖ್ಯಚುನಾವಣಾ ಅಧಿಕಾರಿಯಾಗಿ ವೈಸ್ ಪ್ರಿನ್ಸಿಲಾಲ್ ರಮಾನಂದ ನಿರ್ವಹಿಸಿದರು. ಚುನಾವಣಾ ಸಂಯೋಜಕರಾಗಿ ದೈಹಿಕ ಶಿಕ್ಷಕ ಶಿಕ್ಷಕ ವಾಸು ಎಂ. ಕಾರ್ಯನಿರ್ವಹಿಸಿದರು.

 

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts