ಬಂಟ್ವಾಳ

ಬಂಟ್ವಾಳದಲ್ಲಿ ಧಾರಾಕಾರ ಮಳೆ, ಕುಸಿದ ಗೋಡೆ

ಗುರುವಾರ ಸಂಜೆಯ ಬಳಿಕ ಬಂಟ್ವಾಳದಲ್ಲಿ ಮಳೆ ತೀವ್ರಗೊಂಡಿದೆ. ಬಿ.ಮೂಡ ಗ್ರಾಮದ ಬಂಟಗುರಿ ಎಂಬಲ್ಲಿ ರಂಜಿನಿ ಎಂಬವರ ಮನೆಯ ಅಂಚಿಗೆ ಬರೆ ಜರಿದುಬಿದ್ದಿದೆ. ಸ್ಥಳಕ್ಕೆ ಪುರಸಭಾ ಸದಸ್ಯೆ ಜಯಂತಿ, ಗ್ರಾಮ ಲೆಕ್ಕಾಧಿಕಾರಿ ಶಿವಾನಂದ ನಾಟೆಕಾರ್, ತಾಲೂಕು ಕಚೇರಿ ಸಿಬಂದಿ ಸದಾಶಿವ ಕೈಕಂಬ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಸಿಯುವ ಭೀತಿಯಲ್ಲಿದ್ದ ಪಾಣೆಮಂಗಳೂರಿನ ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ೧೫ ಮಕ್ಕಳನ್ನು ಮೊಗರ್ನಾಡುವಿನ ಹೊಸ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಯಿತು.

ಜಾಹೀರಾತು

೧೯೭೭ರಿಂದ ಪಾಣೆಮಂಗಳೂರಿನ ಬಂಗ್ಲೆಗುಡ್ಡೆಯ ಪುರಸಭೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ವಸತಿ ನಿಲಯ ಕಳೆದ ಕೆಲವು ವರ್ಷಗಳಿಂದ ಶಿಥಿಲಾವಸ್ಥೆಗೆ ತಲುಪಿದ್ದ ಬಗ್ಗೆ ಮಾಧ್ಯಮಗಳಲ್ಲಿಯೂ ವರದಿಗಳಾಗಿತ್ತು.

ಈ ಹಾಸ್ಟೆಲ್ ಕಟ್ಟಡದ ಕೊಠಡಿಯೊಂದರ ಮೇಲ್ಛಾಚಣಿ ಕುಸಿದು ಫ್ಯಾನ್ ಏಕಾಏಕಿ ಕಳಚಿ ಬಿದ್ದಿದ್ದ ಹಿನ್ನೆಲೆಯಲ್ಲಿ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಈಗಾಗಲೇ ನಿಗದಿಪಡಿಸಿದ್ದ ಹೊಸ ಬಾಡಿಗೆ ಕಟ್ಟಡಕ್ಕೆ ಹಾಸ್ಟೆಲ್‌ನಲ್ಲಿದ್ದ ಮಕ್ಕಳನ್ನು ಗುರುವಾರ ಸ್ಥಳಾಂತರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ