ಸಜೀಪನಡುವಿನಲ್ಲಿ ಸ್ವಚ್ಛಮೇವ ಜಯತೇ ಕಾರ್ಯಕ್ರಮಕ್ಕೆ ಚಾಲನೆ

ಬಂಟ್ವಾಳ: ದ..ಜಿಪಂ, ಬಂಟ್ವಾಳ ತಾಪಂ ಸಹಯೋಗದಲ್ಲಿ ಸಜಿಪನಡು ಗ್ರಾಪಂ ಆಶ್ರಯದಲ್ಲಿ ಸ್ವಚ್ಛತಾ ಜಾಗೃತಿ ಕಾರ್ಯಕ್ರಮವಾದ ಸ್ವಚ್ಛಮೇವ ಜಯತೇ ಕಾರ್ಯಕ್ರಮಕ್ಕೆ ಸಜಿಪನಡು ಶಾಲಾ ಆವರಣದಲ್ಲಿ ಚಾಲನೆ ನೀಡಲಾಯಿತು.

ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಪಂ ಅದ್ಯಕ್ಷ ಮೊಹಮ್ಮದ್ ನಾಸೀರ್ ವಹಿಸಿದ್ದರು. ..ಜಿಪಂ ಸ್ವಚ್ಛ ನೆರವು ಘಟಕದ ಸಂಯೋಜಕಿ ಮಂಜುಳಾ ಚಾಲನೆ ನೀಡಿದರು. ಗ್ರಾಮದ ಸ್ವಚ್ಛತೆ ಕೇವಲ ಗ್ರಾಮ ಪಂಚಾಯತ್ನಿಂದ ಸಾಧ್ಯವಿಲ್ಲ ಗ್ರಾಮ ಪಂಚಾಯತ್ನೊಂದಿಗೆ ಶಿಕ್ಷಣ ಇಲಾಖೆ ಆರೋಗ್ಯ ಇಲಾಖೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಮುಖ್ಯವಾಗಿ ಗ್ರಾಮಸ್ಥರು ಕೈ ಜೋಡಿಸಿದರೆ ಮಾತ್ರ ಗ್ರಾಮ ಸ್ವಚ್ಛವಾಗುತ್ತದೆ ಎಂದು ಸಂದರ್ಭ ಅವರು ತಿಳಿಸಿದರು.

ಸ್ವಚ್ಛತೆ ಇದ್ದಲ್ಲಿ ಮಾತ್ರ ಆರೋಗ್ಯ ಸುಧಾರಣೆ ಆಗುತ್ತದೆ. ಪ್ರತಿಯೊಬ್ಬನ ಜೀವನ ಸ್ವಚ್ಛತೆಯಿಂದ ಕೂಡಿರಬೇಕು. ದೇಶದ ಅಭಿವೃದ್ಧಿಗೆ ಸ್ವಚ್ಛತೆಯೂ ಒಂದು ಕಾರಣ ಮಕ್ಕಳು ಈಗಿನಿಂದಲೇ ಸ್ವಚ್ಛಪರಿಸರ, ಸ್ವಚ್ಛಗ್ರಾಮ, ಸ್ವಚ್ಛರಾಜ್ಯ ಸ್ವಚ್ಛದೇಶ ಎಂಬ ಪರಿಕಲ್ಪನೆಯಲ್ಲಿದ್ದರೆ ಆಗ ನಮ್ಮ ದೇಶ ಸ್ವಚ್ಛ ಭಾರತವಾಗುತ್ತದೆ ಎಂದು ಗ್ರಾಪಂ ಅಧ್ಯಕ್ಷ ಮೊಹಮ್ಮದ್ ನಾಸಿರ್ ಹೇಳಿದರು.

ಜಾಹೀರಾತು

ವೇದಿಕೆಯಲ್ಲಿ ಉಪಾಧ್ಯಕ್ಷರಾದ ಸುನೀತಾ ಶಾಂತಿ ಮೋರಾಸ್ ಸದಸ್ಯರಾದ ಸುರೇಶ್, ಬೀಪಾತುಮ್ಮ, ಸಿಸಿಲಿಯಾವಾಸ್ ಉಪಸ್ಥಿತರಿದ್ದರು ಶಾಲಾ ಶಿಕ್ಷಕಿ ಪುಷ್ಪಲತ ಸ್ವಾಗತಿಸಿ, ಗ್ರಾ.ಪಂ ಸದಸ್ಯರಾದ ಸುರೇಶ್ ವಂದಿಸಿದರು. ಗ್ರಾಮ ಪಂಚಾಯತ್ ಸಿಬ್ಬಂದಿ ಮುಝಮ್ಮಿಲ್ ಕಾರ್ಯಕ್ರಮ ನಿರೂಪಿಸಿದರು.೧೫ರಿಂದ ಪ್ರತಿ ಶಾಲೆಯಲ್ಲಿ ಸ್ವಚ್ಛತೆ ಬಗ್ಗೆ ಪ್ರತಿಜ್ಞಾ ವಿಧಿ, ಪ್ರಬಂಧ ಸ್ಪರ್ಧೆ, ಶ್ರಮದಾನ, ಸಭೆ, ಬೀದಿನಾಟಕ, ಆರೋಗ್ಯ ಜಾಗೃತಿಗಳು ನಡೆಯಲಿವೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಜೀಪನಡುವಿನಲ್ಲಿ ಸ್ವಚ್ಛಮೇವ ಜಯತೇ ಕಾರ್ಯಕ್ರಮಕ್ಕೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*