ಬಂಟ್ವಾಳ

ಮೇಲ್ಕಾರಿನಲ್ಲಿ ಗುರುಕುಲ ಕಲಾಕೇಂದ್ರದ ಶಾಖೆ ಉದ್ಘಾಟನೆ

ಜಗತ್ತಿನಲ್ಲಿ ಎಲ್ಲರನ್ನೂ ಒಗ್ಗೂಡಿಸಬಲ್ಲ ಏಕೈಕ ಭಾಷೆ ಎಂದರೆ ಸಂಗೀತ. ಇದನ್ನು ತರಬೇತುಗೊಳಿಸುವುದರಿಂದ ಪ್ರತಿಭಾವಂತರು ಹೊರಹೊಮ್ಮುತ್ತಾರೆ ಎಂದು ಗಾಯಕಿ ರೂಪಾ ಪ್ರಕಾಶ್ ಹೇಳಿದರು.

ಮೇಲ್ಕಾರಿನ ಎಚ್.ಎಂ.ಹೈಟ್ಸ್ ವಸತಿ ಸಮುಚ್ಛಯದಲ್ಲಿ ಪುತ್ತೂರಿನ ಗುರುಕುಲ ಕಲಾಕೇಂದ್ರದ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಾಹೀರಾತು

ಅತಿಥಿಗಳಾಗಿ ಭಾಗವಹಿಸಿದ ಜಿಲ್ಲಾ ಯುವಜನ ಒಕ್ಕೊಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಮಾತನಾಡಿ ಗುರುಪ್ರಿಯ ಅವರು ಸಂಗೀತ ಕ್ಷೇತ್ರ, ಸಮಾಜ ಸೇವಾ ಕ್ಷೇತ್ರಗಳಲ್ಲಿ ಚಿರಪರಿಚಿತರಾಗಿದ್ದು ಅವರ ಜೀವನಕಾರ್ಯಯೋಜನೆಗಳಿಗೆ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಗುರುಕುಲ ಕಲಾಕೇಂದ್ರದ ಕಾರ್ಯದರ್ಶಿ ಶಿವಾನಂದ ಕಾಮತ್ ಮಾತನಾಡಿ ಕಲಾಕೇಂದ್ರವು ತುಳು ಜನಪದ, ಕನ್ನಡ ಜನಪದ ಕಲೆಗಳ ಉಳಿವು ಮತ್ತು ಬೆಳವಣಿಗೆಯ ನಿಟ್ಟಿನಲ್ಲಿ ಕೆಲಸ ಮಾಡುವ ಉದ್ದೇಶವನ್ನು ಹೊಂದಿದೆ ಎಂದರು. ಗಾಯಕ, ಕಲಾವಿದರಾದ ಪ್ರಕಾಶ್ ಮಹಾದೇವನ್, ಗುರುಕುಲ ಕಲಾಕೇಂದ್ರದ ಗೌರವಾಧ್ಯಕ್ಷರಾದ ವಿದ್ಯಾ ನಾಯಕ್ ಉಪಸ್ಥಿತರಿದ್ದರು.

ಜಾಹೀರಾತು

ಕಲಾಕೇಂದ್ರದ ಸಂಚಾಲಕಿ, ಸಂಗೀತ ಶಿಕ್ಷಕಿ ಗುರುಪ್ರಿಯ ಶಿವಾನಂದ ಕಾಮತ್ ಸ್ವಾಗತಿಸಿದರು. ಶಿವಾನಂದ್ ಕಾಮತ್ ಅತಿಥಿಗಳನ್ನು ಗೌರವಿಸಿದರು. ಅಕ್ಷತಾ ನಾಯಕ್ ಪ್ರಾ ರ್ಥಿಸಿದರು.ಕಲಾಕೇಂದ್ರದ ಸದಸ್ಯೆ ದಿವ್ಯ ಪುತ್ತೂರು ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ