Categories: Uncategorized

ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು

ಪಠ್ಯ ಪುಸ್ತಕಗಳ ಜೊತೆಗೆ ಇತರ ಪುಸ್ತಕಗಳನ್ನೂ ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಮಂಗಳೂರು ಶ್ರೀ ರಾಮಕೃಷ್ಣ ಆಶ್ರಮದ ಸತೀಶ್ ಶೆಟ್ಟಿ ಅವರು ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳದ ಬಿ.ಆರ್.ಎಂ.ಪಿ.ಸಿ.ಪಿ. ಶಾಲೆಯಲ್ಲಿ ಮಂಗಳೂರು ರಾಮಕೃಷ್ಣ ಆಶ್ರಮದ ಸಂಚಾರಿ ಗ್ರಂಥಾಲಯದ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ನಿರ್ವಹಿಸಿ  ಮಾತನ್ನಾಡಿದ ಅವರು,  ಕಲಿತ ವಿದ್ಯೆ, ಪಡೆದ ಜ್ಞಾನ ಇವೇ ಮಾನವನ ಬೆಳವಣಿಗೆಗೆ ಪೂರಕ,ತಂದೆ ತಾಯಿಗಳನ್ನು ಗೌರವಿಸಿ. ಶಿಸ್ತಿನಿಂದ ಜೀವನವನ್ನು ರೂಪಿಸಿಕೊಳ್ಳಿ. ಸ್ವಚ್ಛತೆಯು ನಿಮ್ಮನ್ನು ಭಗವಂತನೆಡೆಗೆ ಒಯ್ಯುತ್ತದೆ ಎಂದು ಹೇಳಿದರು.

ಶಾಲಾ ಪ್ರಾಂಶುಪಾಲೆ ರಮಾಶಂಕರ್ ಸಿ. ಶುಭಾಶಂಸನೆಗೈದರು. ಆಸಕ್ತ ವಿದ್ಯಾರ್ಥಿಗಳು ರಾಮಕೃಷ್ಣ ಪರಮಹಂಸ, ವಿವೇಕಾನಂದ ಮೌಲ್ಯಾಧಾರಿತ ಪುಸ್ತಕಗಳನ್ನು ಖರೀದಿಸಿದರು. ಚಿತ್ರಕಲಾ ಶಿಕ್ಷಕ ಹರೀಶ್ ಆಚಾರ್ಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts