Categories: Uncategorized

ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು

ಪಠ್ಯ ಪುಸ್ತಕಗಳ ಜೊತೆಗೆ ಇತರ ಪುಸ್ತಕಗಳನ್ನೂ ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಮಂಗಳೂರು ಶ್ರೀ ರಾಮಕೃಷ್ಣ ಆಶ್ರಮದ ಸತೀಶ್ ಶೆಟ್ಟಿ ಅವರು ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳದ ಬಿ.ಆರ್.ಎಂ.ಪಿ.ಸಿ.ಪಿ. ಶಾಲೆಯಲ್ಲಿ ಮಂಗಳೂರು ರಾಮಕೃಷ್ಣ ಆಶ್ರಮದ ಸಂಚಾರಿ ಗ್ರಂಥಾಲಯದ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ನಿರ್ವಹಿಸಿ  ಮಾತನ್ನಾಡಿದ ಅವರು,  ಕಲಿತ ವಿದ್ಯೆ, ಪಡೆದ ಜ್ಞಾನ ಇವೇ ಮಾನವನ ಬೆಳವಣಿಗೆಗೆ ಪೂರಕ,ತಂದೆ ತಾಯಿಗಳನ್ನು ಗೌರವಿಸಿ. ಶಿಸ್ತಿನಿಂದ ಜೀವನವನ್ನು ರೂಪಿಸಿಕೊಳ್ಳಿ. ಸ್ವಚ್ಛತೆಯು ನಿಮ್ಮನ್ನು ಭಗವಂತನೆಡೆಗೆ ಒಯ್ಯುತ್ತದೆ ಎಂದು ಹೇಳಿದರು.

ಶಾಲಾ ಪ್ರಾಂಶುಪಾಲೆ ರಮಾಶಂಕರ್ ಸಿ. ಶುಭಾಶಂಸನೆಗೈದರು. ಆಸಕ್ತ ವಿದ್ಯಾರ್ಥಿಗಳು ರಾಮಕೃಷ್ಣ ಪರಮಹಂಸ, ವಿವೇಕಾನಂದ ಮೌಲ್ಯಾಧಾರಿತ ಪುಸ್ತಕಗಳನ್ನು ಖರೀದಿಸಿದರು. ಚಿತ್ರಕಲಾ ಶಿಕ್ಷಕ ಹರೀಶ್ ಆಚಾರ್ಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.