Categories: Uncategorized

ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು

ಪಠ್ಯ ಪುಸ್ತಕಗಳ ಜೊತೆಗೆ ಇತರ ಪುಸ್ತಕಗಳನ್ನೂ ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಮಂಗಳೂರು ಶ್ರೀ ರಾಮಕೃಷ್ಣ ಆಶ್ರಮದ ಸತೀಶ್ ಶೆಟ್ಟಿ ಅವರು ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳದ ಬಿ.ಆರ್.ಎಂ.ಪಿ.ಸಿ.ಪಿ. ಶಾಲೆಯಲ್ಲಿ ಮಂಗಳೂರು ರಾಮಕೃಷ್ಣ ಆಶ್ರಮದ ಸಂಚಾರಿ ಗ್ರಂಥಾಲಯದ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ನಿರ್ವಹಿಸಿ  ಮಾತನ್ನಾಡಿದ ಅವರು,  ಕಲಿತ ವಿದ್ಯೆ, ಪಡೆದ ಜ್ಞಾನ ಇವೇ ಮಾನವನ ಬೆಳವಣಿಗೆಗೆ ಪೂರಕ,ತಂದೆ ತಾಯಿಗಳನ್ನು ಗೌರವಿಸಿ. ಶಿಸ್ತಿನಿಂದ ಜೀವನವನ್ನು ರೂಪಿಸಿಕೊಳ್ಳಿ. ಸ್ವಚ್ಛತೆಯು ನಿಮ್ಮನ್ನು ಭಗವಂತನೆಡೆಗೆ ಒಯ್ಯುತ್ತದೆ ಎಂದು ಹೇಳಿದರು.

ಶಾಲಾ ಪ್ರಾಂಶುಪಾಲೆ ರಮಾಶಂಕರ್ ಸಿ. ಶುಭಾಶಂಸನೆಗೈದರು. ಆಸಕ್ತ ವಿದ್ಯಾರ್ಥಿಗಳು ರಾಮಕೃಷ್ಣ ಪರಮಹಂಸ, ವಿವೇಕಾನಂದ ಮೌಲ್ಯಾಧಾರಿತ ಪುಸ್ತಕಗಳನ್ನು ಖರೀದಿಸಿದರು. ಚಿತ್ರಕಲಾ ಶಿಕ್ಷಕ ಹರೀಶ್ ಆಚಾರ್ಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ