ಕಲ್ಲಡ್ಕ

ರಸ್ತೆ ಬಿಟ್ಟು ಚರಂಡಿಗೆ ಇಳಿದ ಬಸ್

ಎದುರಿನಿಂದ ಓವರ್ ಟೇಕ್ ಮಾಡಿ ಬರುತ್ತಿದ್ದ ಟ್ಯಾಂಕರ್‌ಗೆ ದಾರಿಕೊಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಸರಕಾರಿ ಬಸ್ಸೊಂದು ರಸ್ತೆ ಬದಿಯ ಚರಂಡಿಗಿಳಿದ ವಾಲಿನಿಂತ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಸಮೀಪ ಬುಧವಾರ ನಡೆದಿದೆ.

ಜಾಹೀರಾತು

ಘಟನೆಯಿಂದ ಬಸ್‌ನಿರ್ವಾಹಕನೋರ್ವ ಗಾಯಗೊಂಡಿದ್ದು, ಪ್ರಯಾಣಿಕರೆಲ್ಲರು ಅಪಾಯದಿಂದ ಪಾರಾಗಿದ್ದಾರೆ.

ಸುಬ್ರಹ್ಮಣ್ಯ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಅಳಿರ ಎಂಬಲ್ಲಿ ಎದುರಿನಿಂದ ಟ್ಯಾಂಕರ್ ಲಾರಿಯು ಓವರ್ ಟೇಕ್ ಮಾಡಿಕೊಂಡು ಬಂದಿದೆ. ಈ ವೇಳೆ ಬಸ್ ಚಾಲಕ ಹೆಚ್ಚಿನ ಅನಾಹುತವನ್ನು ತಪ್ಪಿಸಲು ರಸ್ತೆ ಬದಿಗೆ ಸರಿಸಿದಾಗ, ನಿಯಂತ್ರಣ ತಪ್ಪಿದ ಬಸ್ ಚರಂಡಿಗಿಳಿದಿದೆ. ಘಟನೆಯಿಂದ ಬಸ್ ನಿರ್ವಾಹಕನಿಗೆ ಗಾಯವಾಗಿದ್ದು, ಇವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು

ಬಸ್ಸಿನಲ್ಲಿ ೪೦ಕ್ಕಿಂತಲೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದು, ತುರ್ತು ನಿರ್ಗಮನದ ಬಾಗಿಲಿನ ಮೂಲಕ ಹೊರ ಬಂದು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ವಿಟ್ಲ ಎಸ್ಸೈ ಯಲ್ಲಪ್ಪ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ