ಮೂಲರಪಟ್ಣ ಸೇತುವೆ ಕಾಮಗಾರಿ ವಿಳಂಬಕ್ಕೆ ಸರಕಾರವೇ ನೇರ ಹೊಣೆ: ಪ್ರಭಾಕರ ಪ್ರಭು

ಮೂಲರಪಟ್ಣ ಸೇತುವೆ ಕಾಮಗಾರಿ ವಿಳಂಬಕ್ಕೆ ಸರಕಾರವೇ ನೇರ ಹೊಣೆಯಾಗಿದೆ ಎಂದು ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ದೂರಿದ್ದಾರೆ.


ಬಂಟ್ವಾಳ ಮತ್ತು ಮಂಗಳೂರು ತಾಲೂಕುನ್ನೊಳಗೊಂಡ ಪ್ರದೇಶಕ್ಕೆ ಸಂಪರ್ಕ ಸೇತುವೆಯಾಗಿರುವ ಮೂಲರಪಟ್ಣ ಸೇತುವೆಯು ಕಳೆದ ವರ್ಷ ಮಳೆಗಾಲ ಪ್ರಾರಂಭ ಸಮಯದಲ್ಲಿ ಮಂಗಳೂರು ತಾಲೂಕಿನ ವ್ಯಾಪ್ತಿಯ ಭಾಗವು ಕುಸಿದುಬಿದ್ದು ಸಾರ್ವಜನಿಕ ಸಂಪರ್ಕವೇ ಕಡಿದುಹೋಗಿತ್ತು. ಈ ಸಂದರ್ಭ ಕುಸಿದು ಬಿದ್ದ ಸೇತುವೆಯ ವೀಕ್ಷೀಸಲು ಬಂದ ಜನಸಾಗರದಲ್ಲಿ ಜನಪ್ರತಿನಿಧಿಗಳೇ ಅಧಿಕರಾಗಿದ್ದರು. ಸರಕಾರದ ಲೋಕೋಪಯೋಗಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಮೇತ ಬಂದವರೆಲ್ಲ ಶೀಘ್ರ ವರ್ಷದೊಳಗೆ ಸೇತುವೆ ಪುನರ್ ನಿರ್ಮಾಣ ಮಾಡಿ ಕೋಡಲಾಗುವುದು ಎಂದು ನೀಡಿದ ಭರವಸೆ ಹಾಗೇ ಉಳಿಯಿತು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಬೆಂಗಳೂರಿನಲ್ಲಿ ನಡೆದ ಪ್ರಥಮ ಅದಿವೇಶನ ಹಾಗೂ ಬೆಳಗಾವಿಯಲ್ಲಿ ನಡೆದ ಅದಿವೇಶನದಲ್ಲಿ ಪ್ರಸ್ತಾಪಿಸಿ ಲಭ್ಯ ಅನುದಾನ ವಿನಿಯೋಗಿಸಿ ತುರ್ತು ಕಾಮಗಾರಿ ಪ್ರಾರಂಭಕ್ಕೆ ಮನವಿ ಮಾಡಿದ್ದರೂ ರಾಜ್ಯ ಲೋಕೋಪಯೋಗಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಂತೂ ತನಗೆ ಸಂಬಂಧವಿಲ್ಲ ಎಂಬಂತೆ ವರ್ತಿಸಿದ್ದಾರೆ. ಸೇತುವೆ ಕುಸಿದು ಬಿದ್ದು ವರ್ಷ ಕಳೆದರೂ ಮುರಿದುಬಿದ್ದ ಸೇತುವೆಗೆ ಮರುಜೋಡಣೆ ಮಾಡಬಹುದೇ ಅಥವಾ ಹೊಸ ಸೇತುವೆ ನಿರ್ಮಾಣ ಮಾಡಬಹುದೇ ಎಂಬ ಸ್ಪಷ್ಟ ನಿರ್ದಾರಕ್ಕೆ ಬರಲು ಇಲಾಖೆಗೆ ಇಷ್ಟವರೆಗೆ ಸಮಯ ತಗಲಿದೆ. ಇನ್ನಾದರೂ ಜಿಲ್ಲೆಯಲ್ಲಿ ಸಂಬಂವಿಸುವ ಅತೀ ತುರ್ತು ಕಾಮಗಾರಿಗಳಿಗೆ ಜಿಲ್ಲಾ ಉಸ್ತುವರಿ ಸಚಿವರು, ಉನ್ನತ ಆಧಿಕಾರಿಗಳು ಗಮನ ನೀಡಿ, ಮೂಲರಪಟ್ಣ ಸೇತುವೆ ಕಾಮಗಾರಿ ಮುಂದಿನ ವರ್ಷವಾದರೂ ಆರಂಭಗೊಳ್ಳಲಿ ಎಂದು ಅವರು ಆಶಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮೂಲರಪಟ್ಣ ಸೇತುವೆ ಕಾಮಗಾರಿ ವಿಳಂಬಕ್ಕೆ ಸರಕಾರವೇ ನೇರ ಹೊಣೆ: ಪ್ರಭಾಕರ ಪ್ರಭು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*