ಬಂಟ್ವಾಳ

ಲಯನ್ಸ್ ಕ್ಲಬ್ ಬಂಟ್ವಾಳ ಅಧ್ಯಕ್ಷ ಶ್ರೀನಿವಾಸ್, 23ರಂದು ಪದಗ್ರಹಣ

ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಶ್ರೀನಿವಾಸ ಪೂಜಾರಿ ಮೇಲ್ಕಾರ್ ನಿಯೋಜನೆಗೊಂಡಿದ್ದು, ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಜೂನ್ 23ರಂದು ನಡೆಯಲಿದೆ.

ಜಾಹೀರಾತು

ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೇಲ್ಕಾರ್, ಕಾರ್ಯದರ್ಶಿ ರಾಧಾಕೃಷ್ಣ ಬಂಟ್ವಾಳ, ಕೋಶಾಧಿಕಾರಿ ದೇವಿಕಾ ದಾಮೋದರ್ ಹಾಗೂ ತಂಡದ ಪದಗ್ರಹಣವನ್ನು ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಸಿ.ಎ.ಮುತ್ತಣ್ಣ ನೆರವೇರಿಸಲಿದ್ದು, ಪ್ರಧಾನ ಅತಿಥಿಯಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಭಾಗವಹಿಸುವರು. ಈ ಸಂದರ್ಭ ಗ್ರಾಮೀಣ ಶಾಲಾ ಪುನರುತ್ಥಾನ ಸಾಧಕ ಪ್ರಕಾಶ್ ಅಂಚನ್ ಅವರನ್ನು ಸನ್ಮಾನಿಸಲಾಗುವುದು. ಗೌರವಾರ್ಪಣೆ, ಪ್ರತಿಭಾ ಪುರಸ್ಕಾರ, ವಿದ್ಯಾ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮಗಳು ನಡೆಯಲಿದೆ ಎಂದು ಹಾಲಿ ಅಧ್ಯಕ್ಷ ಸುಧಾಕರ ಆಚಾರ್ಯ, ಕಾರ್ಯದರ್ಶಿ ರಾಮಯ್ಯ ಶೆಟ್ಟಿ, ಕೋಶಾಧಿಕಾರಿ ಸಂದೀಪ್ ಕುಮಾರ್ ಮತ್ತು ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.