ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಶ್ರೀನಿವಾಸ ಪೂಜಾರಿ ಮೇಲ್ಕಾರ್ ನಿಯೋಜನೆಗೊಂಡಿದ್ದು, ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಜೂನ್ 23ರಂದು ನಡೆಯಲಿದೆ.
ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೇಲ್ಕಾರ್, ಕಾರ್ಯದರ್ಶಿ ರಾಧಾಕೃಷ್ಣ ಬಂಟ್ವಾಳ, ಕೋಶಾಧಿಕಾರಿ ದೇವಿಕಾ ದಾಮೋದರ್ ಹಾಗೂ ತಂಡದ ಪದಗ್ರಹಣವನ್ನು ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಸಿ.ಎ.ಮುತ್ತಣ್ಣ ನೆರವೇರಿಸಲಿದ್ದು, ಪ್ರಧಾನ ಅತಿಥಿಯಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಭಾಗವಹಿಸುವರು. ಈ ಸಂದರ್ಭ ಗ್ರಾಮೀಣ ಶಾಲಾ ಪುನರುತ್ಥಾನ ಸಾಧಕ ಪ್ರಕಾಶ್ ಅಂಚನ್ ಅವರನ್ನು ಸನ್ಮಾನಿಸಲಾಗುವುದು. ಗೌರವಾರ್ಪಣೆ, ಪ್ರತಿಭಾ ಪುರಸ್ಕಾರ, ವಿದ್ಯಾ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮಗಳು ನಡೆಯಲಿದೆ ಎಂದು ಹಾಲಿ ಅಧ್ಯಕ್ಷ ಸುಧಾಕರ ಆಚಾರ್ಯ, ಕಾರ್ಯದರ್ಶಿ ರಾಮಯ್ಯ ಶೆಟ್ಟಿ, ಕೋಶಾಧಿಕಾರಿ ಸಂದೀಪ್ ಕುಮಾರ್ ಮತ್ತು ತಿಳಿಸಿದ್ದಾರೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…