ಜಿಲ್ಲಾ ಸುದ್ದಿ

ಭ್ರೂಣ ಪತ್ತೆ ಮಾಡುವ ಸ್ಕ್ಯಾನಿಂಗ್ ಸೆಂಟರ್ ಮಾಹಿತಿ ನೀಡಿದರೆ ರೂ. 10000 ಬಹುಮಾನ


ಕಾನೂನಿನ ವಿರುದ್ಧವಾಗಿ ಭ್ರೂಣ ಲಿಂಗ ಪತ್ತೆ ಮಾಡುವಂತಹ  ಸ್ಕ್ಯಾನಿಂಗ್ ಸೆಂಟರ್ ಗಳ ಮಾಹಿತಿ ನೀಡಿದವರಿಗೆ ರೂ. 10000 ಹಾಗೂ ಪ್ರಶಸ್ತಿ ನೀಡಲು ಕ್ರಮ ಕೈಗೊಳ್ಳುವಂತೆ  ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‍ನಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಾಹೀರಾತು

ಭ್ರೂಣ ಹತ್ಯೆ ಕಾನೂನು ಬಾಹಿರ ಚಟುವಟಿಕೆಯಾಗಿದ್ದರೂ  ಇಂತಹ ಘಟನೆಗಳು ವರದಿಯಾಗುತ್ತಿವೆ.  ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಸಾಮಾನ್ಯರಂತೆ ತೆರಳಿ ಪರಿಶೀಲನೆ ನಡೆಸುವಂತೆ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಗರ್ಭಿಣಿಯರ ನಿಖರವಾದ ಮಾಹಿತಿಯನ್ನು ಅಂಗನವಾಡಿ ಕೇಂದ್ರದಿಂದ ಪಡೆದುಕೊಳ್ಳಬೇಕು.  ಮಾತೃವಂದನಾ ಯೋಜನೆಯಡಿ ಗರ್ಬಿಣಿಯರಿಗೆ  ದೊರಕಬೇಕಾದ ಸೌಲಭ್ಯ ಸರಿಯಾದ ರೀತಿಯಲ್ಲಿ ತಲುಪಿಸಬೇಕು.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಹಾಗೂ ಇಲಾಖಾ ವತಿಯಿಂದ ನಡೆಯುವಂತಹ ಜನಪರ ಕಾರ್ಯಕ್ರಮಗಳ ಕುರಿತು ಆನ್‍ಲೈನ್ ಪ್ರಚಾರ ನಡೆಸಿ ಬಡತನದಲ್ಲಿರುವಂತಹವ ಜನತೆಗೆ ನೇರವಾಗಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಕುಟುಂಬದೊಳಗಾಗುವ ಯಾವುದೇ ಬಗೆಯ ಹಿಂಸೆಗೋಳಗಾದ ಮಹಿಳೆಯರಿಗೆ ಸಂಬಂಧಿಸಿದಂತೆ ಹೆಚ್ಚು ಸಂರಕ್ಷಣೆ ಒದಗಿಸುವ ಹಿನ್ನಲೆಯಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರನ್ನು ಸಂರಕ್ಷಣಾ ಕಾಯ್ದೆ ಅನುಷ್ಠಾನಗೊಂಡಿದೆ. ದೌರ್ಜನ್ಯಕ್ಕೊಳಗಾದ ಮಹಿಳೆಗೆ ಒಂದೇ ಸೂರಿನಡಿ, ಸಮಗ್ರ ಸೌಲಭ್ಯ( ವೈದೈಕೀಯ, ಪೊಲೀಸ್ ನೆರವು,) ಒದಗಿಸಲು ವಿಶೇಷ ಗೆಳತಿ ಚಿಕಿತ್ಸೆ ಘಟಕದ ಸೌಲಭ್ಯ ತಾಲೂಕು ಮಟ್ಟದಲ್ಲಿ ಹಾಗೂ ಜಿಲ್ಲಾ ಲೇಡಿಗೋಷನ್ ಆಸ್ಪತ್ರೆಯಲ್ಲಿ ದೊರಕುತ್ತಿದೆ. ವರದಕ್ಷಿಣೆ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ ಹಾಗೂ ಲೈಂಗಿಕ ಕಿರುಕ್ಕೊಳಗಾದ ಮಹಿಳೆಯರಿಗೆ, ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ನೆರವು ದೊರಕುತ್ತಿದೆ. ಸಾಗಾಣೆಗೆ ಒಳಪಟ್ಟ ಮಹಿಳೆಯರ ಹಾಗೂ ಮಕ್ಕಳಿಗೆ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಪುನರ್ವಸತಿ ಕೇಂದ್ರಗಳ ಸ್ಥಾಪನೆ, ಹಾಗೂ ಸಂಕಷ್ಠದಲ್ಲಿರುವ ಮಹಿಳೆಯರಿಗೆ ಅಲ್ಪಾವಧಿ ಗೃಹ ಹಾಗೂ ಸಾಂತ್ವನ ಕೇಂದ್ರಗಳ ಸೌಲಭ್ಯ ದೊರಕುತ್ತಿದೆ. ಮಹಿಳೆಯರ ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣ ಹಾಗೂ ಮಕ್ಕಳ ರಕ್ಷಣೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಲಾಖಾ ವತಿಯಿಂದ ದೊರಕುವಂತಹ ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಜನತೆಗೆ ತಿಳಿಯಪಡಿಸಿ ಎಂದು ಸಸಿಕಾಂತ್ ಸೆಂಥಿಲ್ ಹೇಳಿದರು.

ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಸಿಖಂದರ್  ಪಾಶಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಸುಂದರ ಪೂಜಾರಿ, ವೆನ್‍ಲಾಕ್ ಅಧೀಕ್ಷಕಿ ಡಾ. ರಾಜೇಶ್ವರಿ ದೇವಿ ಮತ್ತಿತರರು  ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts