ಸರ್ಕಾರಿ ಕಚೇರಿ

ಕಿಸಾನ್ ಸಮ್ಮಾನ್ ಯೋಜನೆ: ಅರ್ಜಿ ಸಲ್ಲಿಸುವ ಮೊದಲು ನಿಬಂಧನೆ ಗಮನಿಸಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಈಗಾಗಲೇ ಸಾರ್ವಜನಿಕರು ಅರ್ಜಿ ನೀಡುತ್ತಿದ್ದು, ಇದರಲ್ಲಿರುವ ನಿಬಂಧನೆಗಳನ್ನು ಗಮನಿಸಿ ಅರ್ಜಿ ಸಲ್ಲಿಸಲು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಕೃಷಿಕರು ಪಹಣಿ ನೀಡುವ ಅವಶ್ಯಕತೆ ಇರುವುದಿಲ್ಲ. ಆದರೆ ಸ್ವಯಂ ಘೋಷಣೆ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆಗಳ ಜೆರಾಕ್ಸ್ ಜೊತೆ ಗ್ರಾಮ ಪಂಚಾಯತ್ ಅಥವಾ ಗ್ರಾಮ ಕರಣಿಕರ ಕಚೇರಿ ಮತ್ತು ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ. ಭೂ ಪರಿವರ್ತನೆಯಾದ ಜಮೀನು ಹಾಗೂ 94ಸಿ, ಸಿಸಿಯಡಿಯಲ್ಲಿ. ನಿವೇಶನದಡಿಯಲ್ಲಿ ಪಡೆಯಲಾದ ಹಕ್ಕುಪತ್ರಗಳ ಜಮೀನುಗಳಿಗೆ ಅವಕಾಶ ಇರುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಸ್ವಯಂ ಘೋಷಣಾ ಪತ್ರದೊಂದಿಗೆ ನೋಂದಾಯಿಸಬಹುದು. ಆದರೆ ನಿವೃತ್ತ, ಹಾಲಿ ಸೇವೆಯಲ್ಲಿರುವ ಸರಕಾರಿ ಅಧಿಕಾರಿಗಳು (ಗ್ರೂಪ್ ಡಿ ಹೊರತುಪಡಿಸಿ), 10 ಸಾವಿರ ರೂಗಳಿಗಿಂತ ಹೆಚ್ಚಿನ ಮೊತ್ತ ಪಡೆಯುವ ಪಿಂಚಣಿದಾರರು, ಆದಾಯ ತೆರಿಗೆ ಪಾವತಿದಾರರು, ವೃತ್ತಿಪರರು, ಮಾಜಿ ಮತ್ತು ಹಾಲಿ ಸಾಂವಿಧಾನಿಕ ಹುದ್ದೆ ಹೊಂದಿರುವವರು ಇದಕ್ಕೆ ಅನರ್ಹರು. ಹೆಚ್ಚಿನ ಮಾಹಿತಿಗೆ ಸ್ಥಳೀಯ ಗ್ರಾಮಲೆಕ್ಕಾಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ