ರೋಟರಿ ಕ್ಲಬ್ ಬಂಟ್ವಾಳ ಟೌನ್ ಪದಗ್ರಹಣ

ಬಂಟ್ವಾಳ: ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ನ ನೂತನ ತಂಡದ ಪದಗ್ರಹಣ ಸಮಾರಂಭ ಭಾನುವಾರ ರಾತ್ರಿ ನಡೆಯಿತು.

ಜಾಹೀರಾತು

2019-20ನೇ ಸಾಲಿನ ನೂತನ ಪದಾಧಿಕಾರಿಗಳಾದ ಅಧ್ಯಕ್ಷ ಜಯರಾಜ್ ಎಸ್. ಬಂಗೇರ, ಕಾರ್ಯದರ್ಶಿ ಪಲ್ಲವಿ ಕಾರಂತ, ಖಜಾಂಚಿ ಕಿಶೋರ್ ಕುಮಾರ್, ಉಪಾಧ್ಯಕ್ಷರಾಗಿ ಶಾಂತರಾಜ್, ನಿಕಟಪೂರ್ವ ಅಧ್ಯಕ್ಷ ಉಮೇಶ್ ನಿರ್ಮಲ್, ಜೊತೆ ಕಾರ್ಯದರ್ಶಿಯಾಗಿ ಮಹಮ್ಮದ್ ಹನೀಫ್, ಇತರ ಪದಾಧಿಕಾರಿಗಳಾದ ಪದ್ಮನಾಭ ರೈ, ವಿದ್ಯಾ ಸಿ.ಶೆಟ್ಟಿ, ಸ್ಟೀವನ್ ಡಿಸೋಜ, ಆದಂ ಸಲಾಂ, ಶನ್ ಫತ್ ಶರೀಫ್, ಶಂಕರ ಶೆಟ್ಟಿ, ಸುಧಾಕರ ಸಾಲ್ಯಾನ್, ಡಾ.ಸಂತೋಷ್ ಬಾಬು ಸಹಿತ 12 ಮಂದಿ ಪದವಿ ಸ್ವೀಕರಿಸಿದರು. ಇದೇ ವೇಳೆ ಸಾಧಕ ಕೌಶಿಕ್, ಎಸ್ಸೆಸ್ಸೆಲ್ಸಿಯಲ್ಲಿ ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರಕಾರಿ ಹೈಸ್ಕೂಲ್ ವಿದ್ಯಾರ್ಥಿ ಜಯಗೋವಿಂದ ಅವರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ವಿವಿಧ ಯೋಜನೆಗಳಿಗೆ ನೆರವು ನೀಡಲಾಯಿತು. ಈ ಸಂದರ್ಭ ಪದಗ್ರಹಣ ನೆರವೇರಿಸಿ ಮಾತನಾಡಿದ ರೋಟರಿ ಜಿಲ್ಲೆ 3181ರ ಪೂರ್ವ ಜಿಲ್ಲಾ ಗವರ್ನರ್ ಡಾ.ಆರ್.ಎಸ್.ನಾಗಾರ್ಜುನ, ರೋಟರಿ ಅಂತಾರಾಷ್ಟ್ರೀಯ ಸಂಸ್ಥೆ ಸದಸ್ಯರು ಸೇವೆಯಲ್ಲಿ ಸಾರ್ಥಕತೆಯನ್ನು ಕಾಣುತ್ತಾರೆ. ಆತ್ಮವಿಶ್ವಾಸ ವೃದ್ಧಿಗೆ ಇದು ಪೂರಕ ಎಂದರು. 2018-19ರ ಅಸಿಸ್ಟೆಂಟ್ ಗವರ್ನರ್ ಎನ್.ಪ್ರಕಾಶ್ ಕಾರಂತ್, 2019-20ರ ಅಸಿಸ್ಟೆಂಟ್ ಗವರ್ನರ್ ರಿತೇಶ್ ಬಾಳಿಗಾ, ಝೋನಲ್ ಲೆಫ್ಟಿನೆಂಟ್ ಮಂಜುನಾಥ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಈ ಸಂದರ್ಭ 22 ಹೊಸ ಸದಸ್ಯರ ಸೇರ್ಪಡೆ ನಡೆಯಿತು. ನರೇಂದ್ರನಾಥ ಭಂಡಾರಿ ಮತ್ತು ಸುರೇಶ್ ನಾವೂರು ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರೋಟರಿ ಕ್ಲಬ್ ಬಂಟ್ವಾಳ ಟೌನ್ ಪದಗ್ರಹಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*