ಬಂಟ್ವಾಳ

ರೋಟರಿ ಕ್ಲಬ್ ಬಂಟ್ವಾಳ ಟೌನ್ ಪದಗ್ರಹಣ

ಬಂಟ್ವಾಳ: ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ನ ನೂತನ ತಂಡದ ಪದಗ್ರಹಣ ಸಮಾರಂಭ ಭಾನುವಾರ ರಾತ್ರಿ ನಡೆಯಿತು.

ಜಾಹೀರಾತು

2019-20ನೇ ಸಾಲಿನ ನೂತನ ಪದಾಧಿಕಾರಿಗಳಾದ ಅಧ್ಯಕ್ಷ ಜಯರಾಜ್ ಎಸ್. ಬಂಗೇರ, ಕಾರ್ಯದರ್ಶಿ ಪಲ್ಲವಿ ಕಾರಂತ, ಖಜಾಂಚಿ ಕಿಶೋರ್ ಕುಮಾರ್, ಉಪಾಧ್ಯಕ್ಷರಾಗಿ ಶಾಂತರಾಜ್, ನಿಕಟಪೂರ್ವ ಅಧ್ಯಕ್ಷ ಉಮೇಶ್ ನಿರ್ಮಲ್, ಜೊತೆ ಕಾರ್ಯದರ್ಶಿಯಾಗಿ ಮಹಮ್ಮದ್ ಹನೀಫ್, ಇತರ ಪದಾಧಿಕಾರಿಗಳಾದ ಪದ್ಮನಾಭ ರೈ, ವಿದ್ಯಾ ಸಿ.ಶೆಟ್ಟಿ, ಸ್ಟೀವನ್ ಡಿಸೋಜ, ಆದಂ ಸಲಾಂ, ಶನ್ ಫತ್ ಶರೀಫ್, ಶಂಕರ ಶೆಟ್ಟಿ, ಸುಧಾಕರ ಸಾಲ್ಯಾನ್, ಡಾ.ಸಂತೋಷ್ ಬಾಬು ಸಹಿತ 12 ಮಂದಿ ಪದವಿ ಸ್ವೀಕರಿಸಿದರು. ಇದೇ ವೇಳೆ ಸಾಧಕ ಕೌಶಿಕ್, ಎಸ್ಸೆಸ್ಸೆಲ್ಸಿಯಲ್ಲಿ ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರಕಾರಿ ಹೈಸ್ಕೂಲ್ ವಿದ್ಯಾರ್ಥಿ ಜಯಗೋವಿಂದ ಅವರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ವಿವಿಧ ಯೋಜನೆಗಳಿಗೆ ನೆರವು ನೀಡಲಾಯಿತು. ಈ ಸಂದರ್ಭ ಪದಗ್ರಹಣ ನೆರವೇರಿಸಿ ಮಾತನಾಡಿದ ರೋಟರಿ ಜಿಲ್ಲೆ 3181ರ ಪೂರ್ವ ಜಿಲ್ಲಾ ಗವರ್ನರ್ ಡಾ.ಆರ್.ಎಸ್.ನಾಗಾರ್ಜುನ, ರೋಟರಿ ಅಂತಾರಾಷ್ಟ್ರೀಯ ಸಂಸ್ಥೆ ಸದಸ್ಯರು ಸೇವೆಯಲ್ಲಿ ಸಾರ್ಥಕತೆಯನ್ನು ಕಾಣುತ್ತಾರೆ. ಆತ್ಮವಿಶ್ವಾಸ ವೃದ್ಧಿಗೆ ಇದು ಪೂರಕ ಎಂದರು. 2018-19ರ ಅಸಿಸ್ಟೆಂಟ್ ಗವರ್ನರ್ ಎನ್.ಪ್ರಕಾಶ್ ಕಾರಂತ್, 2019-20ರ ಅಸಿಸ್ಟೆಂಟ್ ಗವರ್ನರ್ ರಿತೇಶ್ ಬಾಳಿಗಾ, ಝೋನಲ್ ಲೆಫ್ಟಿನೆಂಟ್ ಮಂಜುನಾಥ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಈ ಸಂದರ್ಭ 22 ಹೊಸ ಸದಸ್ಯರ ಸೇರ್ಪಡೆ ನಡೆಯಿತು. ನರೇಂದ್ರನಾಥ ಭಂಡಾರಿ ಮತ್ತು ಸುರೇಶ್ ನಾವೂರು ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts