ಬಿ.ಸಿ.ರೋಡ್ ಸೌಂದರ್ಯವೃದ್ಧಿಗೆ ಸಮಾಲೋಚನೆ

ಸಾರ್ವಜನಿಕರ ಸಲಹೆ ಪಡೆದು ಕಾರ್ಯ – ರಾಜೇಶ್ ನಾಯ್ಕ್

ಬಂಟ್ವಾಳ ತಾಲೂಕಿನ ಪ್ರಮುಖ ಪೇಟೆಯಾದ ಬಿ.ಸಿ.ರೋಡ್ ಸೌಂದರ್ಯವೃದ್ಧಿಗೆ ಶನಿವಾರ ಮಂಗಳೂರಿನಲ್ಲಿ ಸಮಾಲೋಚನಾ ಸಭೆ ಅಧಿಕಾರಿಗಳು ಮತ್ತು ಪ್ರಾಯೋಜಕರ ಜೊತೆ ಸಂಸದ ನಳಿನ್ ಕುಮಾರ್ ಕಟೀಲು ಉಪಸ್ಥಿತಿಯಲ್ಲಿ ನಡೆಯಿತು.ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಮತ್ತು ಪ್ರಾಯೋಜಕ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಪಸ್ಥಿತರಿದ್ದು, ಸಲಹೆ ಸೂಚನೆಗಳನ್ನು ನೀಡಿದರು.

ಜಾಹೀರಾತು

ಮಂಗಳೂರಿನ ವಿನ್ಯಾಸಕ ಧರ್ಮರಾಜ್ ಈ ಕುರಿತು ರೂಪಿಸಿದ ನಕ್ಷೆಯನ್ನು ಪ್ರದರ್ಶಿಸಿದರು. ಬಿ.ಸಿ.ರೋಡಿನ ನಾರಾಯಣಗುರು ವೃತ್ತದಿಂದ ಕೈಕಂಬದ ವರೆಗಿನ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ ಈ ಕುರಿತು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಟ್ವಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಪ್ರಸ್ತುತ ಬಿ.ಸಿ.ರೋಡ್ ನಗರ ಸುಂದರೀಕರಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಬಿ.ಸಿ.ರೋಡಿನ ನಾರಾಯಣಗುರು ವೃತ್ತದಿಂದ ಕೈಕಂಬದ ವರೆಗಿನ 15 ಕೋ.ರೂ.ಗಳ ಕಾಮಗಾರಿಗೆ ಆಷಾಢ ಮುಗಿದ ಕೂಡಲೇ ಚಾಲನೆ ನೀಡಲಾಗುವುದು ಎಂದು ಹೇಳಿದರು. ವಿನ್ಯಾಸಕ ಎಂಜಿನಿಯರ್ ಧರ್ಮರಾಜ್ ಅವರು ಸುಂದರೀಕರಣದ ಕುರಿತು ಯೋಜನೆ ರೂಪಿಸುತ್ತಿದ್ದು, ಬಹುತೇಕ ಕಾಮಗಾರಿಗಳಿಗೆ ಪ್ರಾಯೋಜಕರು ಮುಂದೆ ಬಂದಿದ್ದಾರೆ. ಮಂಗಳೂರಿನ ಸಭೆಯಲ್ಲಿ ಹೆದ್ದಾರಿ ಎಂಜಿನಿಯರ್ ಗಳು ಸಹಿತ ಸಾಕಷ್ಟು ಮಂದಿ ಉಪಸ್ಥಿತರಿದ್ದು, ತಮ್ಮ ಸಲಹೆಗಳನ್ನು ನೀಡಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಎರಡು ಶೌಚಾಲಯ, ಗುಣಮಟ್ಟದ ಸಿಸಿ ಕ್ಯಾಮರ ,ವಿದ್ಯುದ್ದೀಪ ಅಳವಡಿಕೆ,ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಮುಂಭಾಗ ವೃತ್ತ ನಿರ್ಮಾಣ ಸಹಿತ ಹಲವು ಅಭಿವೃದ್ದಿ ಕೆಲಸಗಳು ಈ ಸುಂದರೀಕರಣ ಯೋಜನೆಯ ನೀಲನಕಾಶೆಯಲ್ಲಿ ಸೇರಿದೆ ಎಂದರು.

ಬಿ.ಸಿ.ರೋಡು ಸುಂದರೀಕರಣದ ಜತೆಗೆ ಬಂಟ್ವಾಳ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮುಂದೆ ಬಂಟ್ವಾಳದ ಗಣ್ಯರ ಸಮಿತಿಯೊಂದನ್ನು ರಚಿಸಿಕೊಂಡು ಅವರ ಸಲಹೆ ಪಡೆಯುವ ಯೋಚನೆಯೂ ಇದೆ. ಮುಂದಿನ ದಿನಗಳಲ್ಲಿ ಸಮಿತಿಯ ಹೆಸರನ್ನು ಪ್ರಕಟಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ್, ಬಿ.ದೇವದಾಸ್ ಶೆಟ್ಟಿ, ದೇವಪ್ಪ ಕರ್ಕೇರ ಉಪಸ್ಥಿತರಿದ್ದರು.

ಜಾಹೀರಾತು

ಬಂಟ್ವಾಳನ್ಯೂಸ್ ಈ ಹಿಂದೆಯೇ ಬಿ.ಸಿ.ರೋಡ್ ನ ಸಮಸ್ಯೆಗಳ ಕುರಿತು ಸರಣಿ ವರದಿಗಳನ್ನು ಪ್ರಕಟಿಸಿತ್ತು.

ಬಿ.ಸಿ.ರೋಡ್ ಬ್ಯೂಟಿಯಾಗಲು ನಡೆಯಲಿದೆ ಮೇಕಪ್

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿ.ಸಿ.ರೋಡ್ ಸೌಂದರ್ಯವೃದ್ಧಿಗೆ ಸಮಾಲೋಚನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*