ಬಂಟ್ವಾಳ

ಶಾಲಾ ಮಕ್ಕಳ ಸಾಗಾಟ ಚಾಲಕರ ಪ್ರತಿಭಟನೆ

ಟ್ರಾಫಿಕ್ ಪೊಲೀಸರು ಕಳೆದು ಎರಡುದಿನಗಳಿಂದ ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಟೆಂಪೋ, ಆಟೋರಿಕ್ಷಾಗಳ ವಿರುದ್ದ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿ ಶನಿವಾರ ಚಾಲಕರು ದಿಢೀರ್ ಪ್ರತಿಭಟನೆಗೆ ಇಳಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಜಾಹೀರಾತು

ಇದೇ ವೇಳೆ ಈ ರಸ್ತೆಯಲ್ಲಿ ಆಗಮಿಸುತ್ತಿದ್ದ ತಹಶೀಲ್ದಾರ್ ರಶ್ಮೀ ಎಸ್.ಆರ್. ಅವರನ್ನು ಭೇಟಿಯಾದ ಚಾಲಕರು, ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳಿಗೆ ಸಂಚಾರ ಕಾನೂನಿನಲ್ಲಿ ಸಡಿಲಿಕೆ ಮಾಡಬೇಕು ಎಂದು ಮನವಿ ಮಾಡಿದರು.
ಪಾವತಿಸುತ್ತೆವೆ. ಆರ್.ಟಿ.ಒ.ಪ್ರಕಾರ ಟೆಂಪೋದಲ್ಲಿ 12 ಸೀಟುಗಳಿದ್ದು, 25 ಮಂದಿ ಶಾಲಾ ಮಕ್ಕಳನ್ನು ಸಾಗಿಸುತ್ತೇವೆ.
ಇಷ್ಟು ದುಬಾರಿ ತೆರಿಗೆ ಪಾವತಿಸಿ 12 ಮಕ್ಕಳ ಸಾಗಾಟ ಮಾಡಿದರೆ ನಮಗೆ ಬದುಕಲು ಸಾಧ್ಯವಿಲ್ಲ. ಹಾಗಾಗಿ ಕಾನೂನಿನಲ್ಲಿ ಅಥವಾ ಸಂಚಾರಿ ನಿಯಮದಲ್ಲಿ ತುಸು ರಿಯಾಯತಿ ನೀಡಬೇಕು ಎಂದು ಒತ್ತಾಯಿಸಿದರು.ಇದೇ ರೀತಿ ಮುಂದುವರಿದರೆ ನಾವು ಮಕ್ಕಳನ್ನು ಶಾಲಾ ವಾಹನದಲ್ಲಿ ಕರೆದುಕೊಂಡು ಹೋಗಲು ಸಾಧ್ಯವಾಗುವುದಿಲ್ಲ ಎಂದು ಮನವರಿಕೆ ಮಾಡಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.