ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಯಶಸ್ಸು: ಪ್ರೊ. ಮನೋಜ್ ಲೂಯಿಸ್

ಪ್ರತಿಯೊಬ್ಬ ವಿದ್ಯಾರ್ಥಿಯೂ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು. ಆತ್ಮವಿಶ್ವಾಸ, ಧೈರ್ಯ ಮತ್ತು ಛಲವನ್ನು ತಮ್ಮೊಳಗೆ ಮೈಗೂಡಿಸಿಕೊಂಡರೆ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಕಾವೂರು ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಪ್ರೊ. ಮನೋಜ್ ಲೂಯಿಸ್ ಹೇಳಿದರು.

ಜಾಹೀರಾತು

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ ಕಾಲೇಜಿನ ೨೦೧೯-೨೦ ಸಾಲಿನ ವಿದ್ಯಾರ್ಥಿ ಸಂಘವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ಎನ್ನುವುದು ನಮ್ಮ ಗೊಂದಲಗಳನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸ್ವತಂತ್ರವಾಗಿ ಯೋಚಿಸುವ ಶಕ್ತಿಯನ್ನು ನೀಡುತ್ತದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವಗುಣ ವರ್ತನೆಯಲ್ಲಿ ಅಡಕವಾಗಿರಬೇಕು. ದೂರದೃಷ್ಟಿತ್ವ ಮತ್ತು ಸ್ಪಷ್ಟತೆ ವಿದ್ಯಾರ್ಥಿಗಳಲ್ಲಿ ಇರಬೇಕು ಎಂದರು.

ಎಸ್.ವಿ.ಎಸ್ ಪದವಿ ಕಾಲೇಜು ಪ್ರಿನ್ಸಿಪಾಲ್ ಡಾ| ಪಾಂಡುರಂಗ ನಾಯಕ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರ ಬಗ್ಗೆ ಗಮನ ಕೊಡಬೇಕು ಎಂದರು.

ಬಂಟ್ವಾಳ ಎಸ್.ವಿ.ಎಸ್ ಕಾಲೇಜುಗಳ ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ಅಧ್ಯಕ್ಷತೆ ವಹಿಸಿದ್ದರು.

ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಶಶಿಕಲಾ ಕೆ. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಾಲಕೃಷ್ಣ ಗೌಡ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಂಜನ ಪೈ ಎ. ಮತ್ತು ಶ್ವೇತಾ ಪೈ ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಲಿನ್ ಕಾರ್ಮೆಲ್ ಡಿಕೋಸ್ಟಾ ಸ್ವಾಗತಿಸಿದರು. ಉಪಾಧ್ಯಕ್ಷೆ ಪಿ. ಶ್ರೀಲಕ್ಷ್ಮೀ ಕಿಣಿ ಅತಿಥಿ ಪರಿಚಯ ಮಾಡಿದರು. ಕಾರ್ಯದರ್ಶಿ ಪಂಚಮಿ ವಿ.ಪ್ರಭು ವರದಿ ಮಂಡಿಸಿದರು. ಜತೆಕಾರ್ಯದರ್ಶಿ ಪೂಜಾರಿ ನೇಹಾ ಕೃಷ್ಣ ಧನ್ಯವಾದ ನೀಡಿದರು. ವಿದ್ಯಾರ್ಥಿನಿ ಖುಷಿ ಎ.ಚೌಟ ಮತ್ತು ಸಹನಾ ಜೆ.ಪಿ. ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಯಶಸ್ಸು: ಪ್ರೊ. ಮನೋಜ್ ಲೂಯಿಸ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*