ಬಂಟ್ವಾಳ

ಎಸ್.ವಿ.ಎಸ್. ವಿದ್ಯಾಗಿರಿ ಆಂಗ್ಲ ಮಾಧ್ಯಮ ಮಕ್ಕಳಿಂದ ನೇಜಿ ನೆಡುವ ಪ್ರಾತ್ಯಕ್ಷಿಕೆ

ಬಂಟ್ವಾಳ ವಿದ್ಯಾಗಿರಿಯಲ್ಲಿರುವ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನೇಜಿ ನೆಡುವ ಪ್ರಾತ್ಯಕ್ಷಿಕೆ ಮತ್ತು ಕೆಸರುಗದ್ದೆಯ ಓಟದ ಸ್ಪರ್ಧೆ ಸಮೀಪದ ಗದ್ದೆಯಲ್ಲಿ ಶನಿವಾರ ನಡೆಯಿತು.

ಜಾಹೀರಾತು

ತಹಶೀಲ್ದಾರ್  ರಶ್ಮಿ ಎಸ್.ಆರ್. ಅವರು ತೆಂಗಿನ ಗರಿ ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರೆ, ಸಭಾ ಕಾರ್ಯಕ್ರಮ ಬಳಿಕ ಅತಿಥಿಗಳು ಗದ್ದೆಗೆ ಹಾಲು ಹಾಕುವ ಮೂಲಕ ನೇಜಿ ನೆಟ್ಟರು.

ಗದ್ದೆಯಲ್ಲಿ ನೇಜಿ ನೆಡುವ ಕಾರ್ಯದಲ್ಲಿ ಉತ್ಸಾಹದಿಂದ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಉದ್ಘಾಟಕರಾದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಸಿ.ಆರ್. ಕೃಷಿಯ ಬದುಕಿನೊಂದಿಗೆ ವಿದ್ಯಾಭ್ಯಾಸ ನಡೆಸುವುದು ಇಂದು ಅಗತ್ಯ ಎಂದು ಹೇಳಿದರು.

ಪ್ರಕೃತಿ ಜೊತೆ ಬೆರೆತರೆ ಆರೋಗ್ಯವಂತ ದೇಹ, ಮನಸ್ಸು ಹೊಂದಲು ಸಾಧ್ಯ ಎಂದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ದಿವಾಕರ್, ಶಿಕ್ಷಕ ರಕ್ಷಕ ಸಂಘದ ಆಧ್ಯಕ್ಷ ಶ್ರೀಧರ ಬಿ, ಶಾಲಾ ಆಡಳಿತಾಧಿಕಾರಿ ಐತಪ್ಪ ಪೂಜಾರಿ, ಶಿಕ್ಷಕ ರಕ್ಷಕ ಸಂಘದ ಖಜಾಂಚಿ ಹರಿಶ್ಚಂದ್ರ ಉಪಸ್ಥಿತರಿದ್ದರು, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತ ಸ್ವಾಗತಿಸಿದರು. ಶಿಕ್ಷಕ ಹರಿಪ್ರಸಾದ್ ವಂದಿಸಿದರು. ಶಿಕ್ಷಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ