ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಲ್ಲಿ 2018-19ನೇ ಸಾಲಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ವಿವಿಧ ಯೋಜನೆಯಡಿ 192 ಫಲಾನುಭವಿಗಳಿಗೆ 1.14 ಕೋಟಿ ರೂ.ಸಹಾಯಧನ ಬಿಡುಗಡೆಯಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳದ ಶಾಸಕರ ಕಾರ್ಯಾಲಯದಲ್ಲಿ ಶನಿವಾರ ಸಂಜೆ ಶ್ರಮಶಕ್ತಿ ಯೋಜನೆಯಲ್ಲಿ ಬಿಡುಗಡೆಯಾದ 74 ಫಲಾನುಭವಿಗಳಿಗೆ ಚೆಕ್ ವಿತರಿಸಿ ಅವರು ಮಾತನಾಡುತ್ತಿದ್ದರು.
ಶ್ರಮಶಕ್ತಿ ಯೋಜನೆಯಲ್ಲಿ 74 ಫಲಾನುಭವಿಗಳಿಗೆ 19.50ಲಕ್ಷ,ಸ್ವಯಂ ಉದ್ಯೋಗದಡಿ 20ಫಲಾನುಭವಿಗಲಕಿಗೆ 24.50ಲಕ್ಷ , 66ಫಲಾನುಭವಿಗಳುಗೆ6.60 ಲಕ್ಷ ರೂ.ಕಿರುಸಾಲ ಹಾಗೂಗಂಗಾಕಲ್ಯಾಣದಡಿ 32ಫಲಾನುಭವಿಗಳಿಗೆ 64 ಲಕ್ಷರೂ.ಮಂಜೂರಾಗಿದೆ ಎಂದರು.
ಶಾಸಕರ ಕಾರ್ಯಾಲಯ ಸದಾ ತೆರದಿದ್ದು, ಸರಕಾರದ ಸವಲತ್ತು, ಯೋಜನೆಗಳ ಕುರಿತ ಅಗತ್ಯ ಮಾಹಿತಿಯನ್ನು ಪಡೆದುಕೊಂಡು ಸದುಪಯೋಗ ಪಡೆದುಕೊಳ್ಳಬೇಕು ಎಂದ ಶಾಸಕರು ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ನಲ್ಲು ಮಹಿಳೆಯರ ಅಭ್ಯುದಯಕ್ಕೆ ಹಲವಾರು ಯೋಜನೆಯನ್ನು ಪ್ರಕಟಿಸಿದೆ ಎಂದರು.
ಜಿಪಂ ಸದಸ್ಯೆ ಕಮಾಲಾಕ್ಷಿ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್ ಸಫ್ವಾನ್ ಸ್ವಾಗತಿಸಿ,ವಂದಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳದಲ್ಲಿ 192 ಫಲಾನುಭವಿಗಳಿಗೆ 1.14 ಕೋಟಿ ರೂ ಸಹಾಯಧನ"
Be the first to comment on "ಬಂಟ್ವಾಳದಲ್ಲಿ 192 ಫಲಾನುಭವಿಗಳಿಗೆ 1.14 ಕೋಟಿ ರೂ ಸಹಾಯಧನ"