ಬಂಟ್ವಾಳ

ಮಿನಿ ವಿಧಾನಸೌಧದಲ್ಲಿ ಹೊಸ ಲುಕ್: ಜನಸ್ನೇಹಿ ಕೇಂದ್ರ ಸ್ಥಳಾಂತರ

ಸದಾ ಅವ್ಯವಸ್ಥೆಯ ಆಗರವಾಗಿ ಸಾರ್ವಜನಿಕರ ಟೀಕೆಗೆ ಗುರಿಯಾಗುತ್ತಿದ್ದ ಬಂಟ್ವಾಳ ಮಿನಿ ವಿಧಾನಸೌಧಕ್ಕೀಗ ಹೊಸ ಲುಕ್. ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಸಾರ್ವಜನಿಕರಿಗೂ, ಸಿಬ್ಬಂದಿಗೂ ಸಮಸ್ಯೆ ಉಂಟುಮಾಡುತ್ತಿದ್ದ ಜಾಗದಿಂದ ಇದೀಗ ಅಟಲ್ ಜೀ ಜನಸ್ನೇಹಿ ಕೇಂದ್ರ ಕಟ್ಟಡದ ಮಧ್ಯಭಾಗದ ಖಾಲಿ ಜಾಗಕ್ಕೆ ಶಿಫ್ಟ್ ಆಗಿದೆ.

 

ಜಾಹೀರಾತು

ಸಾರ್ವಜನಿಕರು ಪಾಣೆಮಂಗಳೂರು, ಬಂಟ್ವಾಳ ಹೋಬಳಿಯ ಅಟಲ್ ಜೀ ಜನಸ್ನೇಹಿ ಕೇಂದ್ರಗಳು, ಆಧಾರ್ ಸೆಂಟರ್, ಅರ್ಜಿ ಸ್ವೀಕೃತಿಗೆಂದು ಬರುವವರಿದ್ದರೆ ನೇರ ಮಿನಿ ವಿಧಾನಸೌಧ ಪ್ರವೇಶಿಸಿದ ಕೂಡಲೇ ಅದರ ಮಧ್ಯಭಾಗಕ್ಕೆ ಬಂದು ನಿಲ್ಲಬಹುದು. ಮಳೆನೀರು ಬೀಳದಂತೆ ಹಾಗೂ ಬಿಸಿಲು ಕಾಣುವಂತ ಛಾವಣಿ ಇರುವ ಈ ಜಾಗದಲ್ಲಿ ನಿಲ್ಲಲೂ ಅವಕಾಶ ಹೆಚ್ಚು. ಹಿಂದೆ ಕಾರ್ಯಾಚರಿಸುತ್ತಿದ್ದ ಜಾಗದಲ್ಲಿ ಕೇಬಲ್ ಗಳು, ಅಲ್ಲಲ್ಲಿದ್ದು, ಸಮಸ್ಯೆ ತಲೆದೋರುತ್ತಿತ್ತು. ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಈ ವ್ಯವಸ್ಥೆಯನ್ನು ಮಾಡಿದ್ದೇವೆ ಎಂದು ತಹಶೀಲ್ದಾರ್ ರಶ್ಮಿ ತಿಳಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts