ಶರತ್ ಮಡಿವಾಳ ನೆನಪಿನಲ್ಲಿ ವನಮಹೋತ್ಸವ

ಸಜೀಪಮೂಡದಲ್ಲಿರುವ ಕಂದೂರು ಶ್ರೀಕೃಷ್ಣ ಶಿಶು ಮಂದಿರ ಹಾಗೂ ಸಜೀಪ ಮುನ್ನೂರಿನ ಶಾಂತಿನಗರ ಸರಕಾರಿ ಪ್ರಾಥಮಿಕ ಶಾಲೆ ವಠಾರದಲ್ಲಿ ಪುಟಾಣಿ ಮಕ್ಕಳ ಸಹಭಾಗಿತ್ವದಲ್ಲಿ ಶರತ್ ಮಡಿವಾಳ ನೆನೆಪಿಗಾಗಿ ಹುತಾತ್ಮ ಶರತ್ ಅಭಿಮಾನಿ ಬಳಗದ ವತಿಯಿಂದ ವನಮಹೋತ್ಸವ ಮತ್ತು ಪುಟಾಣಿ ಮಕ್ಕಳಿಗೆ ಕೊಡೆ ವಿತರಣೆ ಮಾಡುವ ಮೂಲಕ ಬಲಿದಾನ ದಿವಸವನ್ನಾಗಿ ಅಚರಿಸಲಾಯಿತು.

ಜಾಹೀರಾತು

ಶ್ರೀಕೃಷ್ಣ ಶಿಶುಮಂದಿರ, ಶಾಂತಿನಗರ ಸರಕಾರಿ ಶಾಲೆ ಮತ್ತು ಶಾಂತಿನಗರ ಅಂಗನವಾಡಿ ಕೇಂದ್ರದ ಎಲ್ಲಾ ಮಕ್ಕಳಿಗೂ ಶರತ್ ಸವಿ ನೆನಪಿಗಾಗಿ ಕೊಡೆ ವಿತರಿಸಲಾಯಿತು. ಶರತ್ ಅವರ ತಂದೆ ತನಿಯಪ್ಪ ಮಡಿವಾಳ, ಧರ್ಮ ಜಾಗರಣ ಜಿಲ್ಲಾ ಸಂಯೋಜಕ್ ಸಚಿನ್ ಮೆಲ್ಕಾರ್, ಸಜೀಪ ಜನಸೇವಾ ಟ್ರಸ್ಟ್ ಅಧ್ಯಕ್ಷ ಯಶವಂತ ದೇರಾಜೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಇದರ ನಿರ್ದೇಶಕ ಪುರುಷೋತ್ತಮ ಸಾಲ್ಯಾನ್ ನರಿಕೊಂಬು, ವಿಶ್ವಹಿಂದೂ ಪರಿಷತ್ ವಿಟ್ಲ ಪ್ರಖಂಡದ ಕಾರ್ಯಾಧ್ಯಕ್ಷ ಪದ್ಮನಾಭ ವಿಟ್ಲ, ವಿಶ್ವ ಹಿಂದೂ ಪರಿಷತ್ ನಾಯಕ ಲೋಹಿತ್ ಪಣೋಲಿಬೈಲು, ಚರಣ್ ಗಟ್ಟಿ ಮಾರ್ನಬೈಲು, ವಿಶ್ವನಾಥ ಪೂಜಾರಿ ಮರ್ತಾಜೆ, ಸದಾನಂದ ಸುವರ್ಣ, ಪುರುಷೋತ್ತಮ ಪೂಜಾರಿ ಮಿತ್ತಕಟ್ಟ, ಭಜರಂಗದಳ ಮುಖಂಡ ದೀಪಕ್ ಕೋಟ್ಯಾನ್ ಸಜೀಪ, ರವೀಂದ್ರ ಕಂದೂರು ಇದ್ದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಶರತ್ ಮಡಿವಾಳ ನೆನಪಿನಲ್ಲಿ ವನಮಹೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*