ಕಲ್ಲಡ್ಕ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಸತ್ತಿನ ಪಾತ್ರ ಬಹುಮುಖ್ಯ: ದಿನೇಶ್ ಅಮ್ಟೂರು

ಸಂವಿಧಾನವೆಂಬುದು ದೇಶದ ಧರ್ಮಗ್ರಂಥ, ಭಾರತ ಅತಿದೊಡ್ಡ ಪ್ರಜಾಪ್ರಭುತ್ವ ಹೊಂದಿದ ರಾಷ್ಟ್ರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಸತ್ತಿನ ಪಾತ್ರ ಬಹುಮುಖ್ಯ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ, ಬಿಜೆಪಿ ನಾಯಕ ದಿನೇಶ್ ಅಮ್ಟೂರು ಹೇಳಿದ್ದಾರೆ.

ಜಾಹೀರಾತು

ಕಲ್ಲಡ್ಕದ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಅಧಿವೇಶನ, ವಿವಿಧ ಸಂಘಗಳ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಅಗ್ನಿ ಹೋತ್ರ ಹಾಗೂ ಸರಸ್ವತಿ ವಂದನೆ ಮೂಲಕ ಆರಂಭಿಸಲಾಯಿತು. ಅತಿಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ಸಂಸತ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕಿ ರಾಜೇಶ್ವರಿ ಪ್ರಮಾಣವಚನವನ್ನು ಬೋಧಿಸಿದರು. ನಂತರ ವಿವಿಧ ಸಂಘಗಳ ಉದ್ಘಾಟನೆಯನ್ನು ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಠ್ಠಲ್ ನಾಯ್ಕ್ ನೆರವೇರಿಸಿದರು.

ಶಾಲಾ ನಾಯಕನಾಗಿ ೭ನೇ ತರಗತಿಯ ದೀಕ್ಷಿತ್, ಗೃಹಮಂತ್ರಿಯಾಗಿ ಶ್ರಮಿಕಾ, ಕೃಷಿ ಸಚಿವರಾಗಿ ಶ್ರೀಜನ್ಯ ಹಾಗೂ ಹೇಮಂತ್, ನೀರಾವರಿ ಸಚಿವರಾಗಿ ಭುವನ್, ಸಾಂಸ್ಕೃತಿಕ ಮಂತ್ರಿಯಾಗಿ ಮನಸ್ವಿ ಹಾಗೂ ನಿಖಿತಾ, ಕ್ರೀಡಾಮಂತ್ರಿಯಾಗಿ ರೋಹಿತ್, ಆರೋಗ್ಯಮಂತ್ರಿಯಾಗಿ ತ್ರಿಶಾ ಅತಿಕಾರಿ, ಸ್ವಚ್ಛತಾ ಮಂತ್ರಿಯಾಗಿ ಜೀವಿತ್ ಮತ್ತು ಧನುಷ್, ಶಿಕ್ಷಣ ಮಂತ್ರಿಯಾಗಿ ಶ್ರೀನಿವಾಸ ಮತ್ತು ಅನನ್ಯ, ವಾರ್ತಾಸಚಿವರಾಗಿ ತಿಲಕ್ ಮತ್ತು ಅನುಷಾ, ಸಭಾಪತಿಯಾಗಿ ಕುಶಿ ಪೂಜಾರಿ, ವಿರೋಧ ಪಕ್ಷದ ನಾಯಕನಾಗಿ ಕೆ ಕೆ ಧನುಷ್ ಕೆ ಜಿ ಮಾಸ್ಟರ್ ಇವರು ಪ್ರಮಾಣವಚನ ಸ್ವೀಕರಿಸಿದರು.

ಜಾಹೀರಾತು

ತಾಲೂಕು ಪಂಚಾಯತ್ ಸದಸ್ಯರಾದ ಲಕ್ಷ್ಮೀಗೋಪಾಲಾಚಾರ್, ಕುಲ್ಯಾರು ನಾರಾಯಣ ಶೆಟ್ಟಿ, ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಿಠ್ಠಲ್ ನಾಯ್ಕ್, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಮತಾ ಶೆಟ್ಟಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್, ಸುಧನ್ವ ಶಾಸ್ತ್ರೀ ಹಾಗೂ ಶಾಲಾ ಮುಖ್ಯಶಿಕ್ಷಕರಾದ ರವಿರಾಜ್ ಕಣಂತೂರು ಉಪಸ್ಥಿತರಿದ್ದರು. ಅಧ್ಯಾಪಕರಾದ ಸುಮಂತ್ ಆಳ್ವ ಕಾರ್ಯಕ್ರಮ ನಿರೂಪಿಸಿದರು. ವೇದಾವತಿ ಸ್ವಾಗತಿಸಿದರು. ರೇಷ್ಮಾ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ