ಬಂಟ್ವಾಳ

ಐಸ್ ಕ್ರೀಂ ವಾಹನ ನಿಲ್ಲಿಸಿದಾಗ ಬಯಲಾಯಿತು ಅಕ್ರಮ ಗೋಸಾಗಾಟ ಪ್ರಕರಣ

ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸಾಲೆತ್ತೂರು ಜಂಕ್ಷನ್ ಬಳಿ ಐಸ್ ಕ್ರೀಂ ಸಾಗಾಟದ ವಾಹನವೊಂದರಲ್ಲಿ ಹಸುಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಬುಧವಾರ ಪತ್ತೆಹಚ್ಚಿದ್ದಾರೆ.

ಜಾಹೀರಾತು

ಹಳದಿ ಮತ್ತು ನೀಲಿ ಬಣ್ಣದ ಐಸ್ ಕ್ರೀಂ ಬ್ರಾಂಡ್ ಒಂದರ ಹೆಸರು ಬರೆದಿರುವ ವಾಹನವನ್ನು ಪಿಎಸ್ ಐ ಯಲ್ಲಪ್ಪ ಎಸ್ ಮತ್ತು ಸಿಬ್ಬಂದಿ ಇಲಾಖಾ ಜೀಪಿನಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವ ಸಮಯ ಕೊಳ್ನಾಡು ಗ್ರಾಮದ ಸಾಲೆತ್ತೂರು ಜಂಕ್ಷನ್ ಬಳಿ ಇಂದು ಬೆಳಗ್ಗೆ ಗಮನಿಸಿ, ನಿಲ್ಲಿಸಲು ಸೂಚಿಸಿದಾಗ ಚಾಲಕನು ಒಮ್ಮೇಲೇ ವಾಹನವನ್ನು ಮುಂದಕ್ಕೆ ಚಲಾಯಿಸಿದ. ಕೊಳ್ನಾಡು ಗ್ರಾಮದ ಕಟ್ಟತ್ತಿಲ ಗೋಪಾಲಕೃಷ್ಣ ಮಠ ಎಂಬಲ್ಲಿ ವಾಹನವನ್ನು ನಿಲ್ಲಿಸಿದಾಗ, ಚಾಲಕ ಮತ್ತು ಇನ್ನೋರ್ವ ಪರಾರಿಯಾಗಿದ್ದು, ವಾಹನದ ಹಿಂಭಾಗದ ಬಾಗಿಲನ್ನು ತೆರೆದು ನೋಡಲಾಗಿ ಕಂದು ಬಣ್ಣದ ಎರಡು ಹಸುಗಳು ಮತ್ತು ಕಪ್ಪು ಬಣ್ಣದ ಗಂಡು ಕರುವನ್ನು ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡು ಬಂದಿದೆ. ಆರೋಪಿಗಳು ಜಾನುವಾರುಗಳನ್ನು ಎಲ್ಲಿಂದಲೋ ಕಳವು ಮಾಡಿಕೊಂಡು ಬಂದು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿ ವಧೆ ಮಾಡಿ ಮಾಂಸ ಮಾಡುವ ಸಲುವಾಗಿ ಐಸ್ ಕ್ರಿಂ  ವಾಹನದಲ್ಲಿ ಕೇರಳ ಕಡೆಗೆ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಾಗಿದ್ದು ತನಿಖೆಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ