ಕಲ್ಲಡ್ಕ

ಕಲ್ಲಡ್ಕದಲ್ಲಿ ರಕ್ತದಾನ ಶಿಬಿರ, ದಾನಿಗಳಿಗೆ ಸನ್ಮಾನ

www.bantwalnews.com

ಜಾಹೀರಾತು

ಕಲ್ಲಡ್ಕದ ಟಿಕ್ಕಾ ಪೋಯಿಂಟ್ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್, ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ ಸಹಭಾಗಿತ್ವದಲ್ಲಿ_ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ಕಲ್ಲಡ್ಕ ಪ್ರೀತಿ ಕಾಂಪ್ಲೆಕ್ಸ್ ಬಳಿಯ ಗಂಗಾಧರ ಸಂಕೀರ್ಣದಲ್ಲಿ ನಡೆಯಿತು.

ಉದ್ಘಾಟಿಸಿದ ಕಲ್ಲಡ್ಕ ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಶೇಖ್ ಮುಹಮ್ಮದ್ ಫೈಝಿ ಇರ್ಫಾನಿ ಮಾತನಾಡಿ ರಕ್ತದಾನವು ಜೀವದಾನ ಮಾಡಿದಷ್ಟೇ ಪುಣ್ಯ ಹಾಗೂ ಶ್ರೇಷ್ಠ ಕಾರ್ಯವಾಗಿದ್ದು ರಕ್ತದಾನಿಗಳನ್ನು ಜೀವದಾನಿಗಳು ಎಂದು ಸಂಭೋದಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅದ್ಯಕ್ಷ ಕೆ.ಪದ್ಮನಾಭ ರೈಮಾತನಾಡಿ ಜಾತಿ,ಮತ, ಧರ್ಮದ ಭೇದ ಬಾವವಿಲ್ಲದೆ ಮಾಡುವ ಮಾಡುವ ರಕ್ತದಾನದಂತಹ ಪುಣ್ಯ ಕಾರ್ಯಗಳಿಂದ ಮಾನವೀಯ ಮೌಲ್ಯಗಳು ಜಗತ್ತಿನೆಲ್ಲೆಡೆ ನೆಲೆನಿಲ್ಲುವಂತಾಗಲಿ ಎಂದರು.

ಹಜಾಜ್ ಸಮೂಹ ಸಂಸ್ಥೆಯ ಪಾಲುದಾರರು ಹಾಜಿ ಜಿ ಯೂಸುಫ್ ಗೋಳ್ತಮಜಲು, ಕಲ್ಲಡ್ಕ ಪ್ರೀತಿ ಕಾಂಪ್ಲೆಕ್ಸ್ ಮಾಲಕ ಶಾಂತರಾಮ ಶೆಟ್ಟಿ, ಬಿ.ಮೂಡ ಸರಕಾರಿ ಪ.ಪೂ.ಕಾಲೇಜು ಉಪನ್ಯಾಸಕ ಅಬ್ದುಲ್ ರಝಾಕ್ ಮಾಸ್ಟರ್, ಗೋಳ್ತಮಜಲು ಗ್ರಾ.ಪಂ. ಸದಸ್ಯ ಯೂಸುಫ್ ಹೈದರ್,ಪ್ರಮುಖರಾದ ಕೆ.ಎನ್.ನವಾಝ್ ಕಲ್ಲಡ್ಕ, ಇಂಜಿನಿಯರ್ ಇಮ್ರಾನ್ ಕಲ್ಲಡ್ಕ, ಜಿ.ಎಸ್.ಸಿದ್ದೀಕ್ ಫ್ಯಾಶನ್ ಫ್ರೈಡ್, ರಫೀಕ್ ಮಾಸ್ಟರ್, ಸಜ್ಜಾದ್ ಝಮಾನ್ ಕಲ್ಲಡ್ಕ, ಜೆ.ಕೆ.ಜವಾಝ್ ಕಲ್ಲಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು

ಬ್ಲಡ್ ಡೋನರ್ಸ್ ಅದ್ಯಕ್ಷ ಸಿದ್ದೀಕ್ ಮಂಜೇಶ್ವರ, ಕಾರ್ಯನಿರ್ವಾಹಕ ಫಾರೂಕ್ ಬಿಗ್ ಗ್ಯಾರೇಜ್, ಸದಸ್ಯರಾದ ದಾವೂದ್ ಬಜಾಲ್, ಮನ್ಸೂರ್ ಸೂರಜ್, ಕಲ್ಲಡ್ಕ ಟಿಕ್ಕಾ ಪಾಯಿಂಟ್ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಸಲಹೆಗಾರ ಅಶ್ರಫ್ ಅಸುರು, ಹಾರಿಸ್ ಅಮರ್, ಅದ್ಯಕ್ಷ ಅಫ್ರಿದ್ ಮಿಲಾದ್‌‌‌, ಬುಟ್ಟೋ ಫಾರೂಕ್, ಜೈದ್ ಕಲ್ಲಡ್ಕ, ಮೊದಲಾದವರು ಉಪಸ್ಥಿತರಿದ್ದರು. ರಕ್ತದಾನಿ ಹಕೀಂ ಕಲ್ಲಡ್ಕ ಹಾಗೂ ಕಲ್ಲಡ್ಕದ ರಕ್ತದಾನಿ ಏಳು ಮಂದಿ ಒಡಹುಟ್ಟಿದ ಸಹೋದರರಾದ ಹೈದರ್, ಇಕ್ಬಾಲ್, ರಿಯಾಝ್, ಮುನಾಝ್, ನವಾಝ್, ರಶೀದ್ ಬಾಬ, ಜುನೈದ್ ಅವರನ್ನು ಸನ್ಮಾನಿಸಲಾಯಿತು.   ಶಿಬಿರದಲ್ಲಿ ಮಹಿಳೆಯರೂ ಸೇರಿದಂತೆ ಒಟ್ಟು 85 ಮಂದಿ ದಾನಿಗಳು ರಕ್ತದಾನ ಮಾಡಿದರು. ಟಿಕ್ಕಾ ಪಾಯಿಂಟ್ ಸಲಹೆಗಾರ, ಪತ್ರಕರ್ತ ಲತೀಫ್ ನೇರಳಕಟ್ಟೆ ಸ್ವಾಗತಿಸಿ, ಸದಸ್ಯ ಶಾಫಿ ಕಲ್ಲಡ್ಕ ವಂದಿಸಿದರು. ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts