ಬಂಟ್ವಾಳ

ಬಂಟ್ವಾಳ ಪುರಸಭೆ ವಾಣಿಜ್ಯ ಕಟ್ಟಡಗಳ ತ್ಯಾಜ್ಯ ಸಂಗ್ರಹಣ ಶುಲ್ಕ ದರ ಇಳಿಕೆ

ಶಾಸಕ ರಾಜೇಶ್ ನಾಯ್ಕ್ ಸೂಚನೆಯಂತೆ ಕ್ರಮ – ಪುರಸಭೆ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಸೂಚನೆಯಂತೆ ಪುರಸಭೆಯ ತ್ಯಾಜ್ಯ ಸಂಗ್ರಹಣಾ ಶುಲ್ಕವನ್ನು ವಾಣಿಜ್ಯ ಕೈಗಾರಿಕೆ ಮತ್ತು ಮಳಿಗೆಗಳಿಗೆ ಸಂಬಂಧಿಸಿ ಇಳಿಕೆ ಮಾಡಲಾಗಿದೆ ಎಂದು ಪುರಸಭೆ ಪ್ರಕಟಣೆ ನೀಡಿದೆ.

ಜಾಹೀರಾತು

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ತ್ಯಾಜ್ಯ ಸಂಗ್ರಹಣೆಗೆ ಸಂಬಂಧಿಸಿ ಏ.1ರಿಂದ ಶುಲ್ಕವನ್ನು ವಸೂಲು ಮಾಡಲಾಗುತ್ತಿದ್ದು, ಈ ಸಂಬಂಧ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ತ್ಯಾಜ್ಯ ಸಂಗ್ರಹಣಾ ಶುಲ್ಕ ಅತ್ಯಧಿಕವಾಗಿದೆ, ಇದನ್ನು ಕಡಿಮೆ ಮಾಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮನವಿ ಮಾಡಿದ್ದರು. ಈ ಸಂಬಂಧ ಜುಲೈ 2ರಂದು ಪುರಸಭಾ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಸಾರ್ವಜನಿಕರಿಗೆ ಹೊರೆಯಾಗುತ್ತಿರುವ ವಾಣಿಜ್ಯ ತ್ಯಾಜ್ಯ ಸಂಗ್ರಹಣಾ ಶುಲ್ಕವನ್ನು ಕಡಿತಗೊಳಿಸಲು ಮಂಗಳೂರು ಸಹಾಯಕ ಆಯುಕ್ತರಿಗೆ ನಿರ್ದೇಶನ ನೀಡಿದ್ದರು. ಅದರಂತೆ ಬಂಟ್ವಾಳ ಪುರಸಭೆ ಜುಲೈ 20ರಂದು ವಾಣಿಜ್ಯ, ಕೈಗಾರಿಕೆ, ಮಳಿಗೆಗಳ ತ್ಯಾಜ್ಯ ಸಂಗ್ರಹಣಾ ಶುಲ್ಕವನ್ನು ಡಿಪಿಆರ್ ದರಗಳಿಂತ ಕಡಿಮೆ ಮಾಡಿ ಪರಿಷ್ಕರಿಸಿದೆ ಎಂದು ಮುಖ್ಯಾಧಿಕಾರಿ ರೇಖಾ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ಸ್ವಾಗತ: ವಾಣಿಜ್ಯ ಉದ್ದೇಶದ ಕಟ್ಟಡಗಳ ತ್ಯಾಜ್ಯ ಸಂಗ್ರಹಣ ಶುಲ್ಕ ಅತಿಯಾಗಿದ್ದು ಅದನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲಿಸುವಂತೆ ಶಾಸಕ ರಾಜೇಶ್ ನಾಯ್ಕ್ ಸೂಚಿಸಿದ್ದು, ಇದರ ಪರಿಣಾಮವಾಗಿ ವಾಣಿಜ್ಯ ಉದ್ದೇಶದ ಕಟ್ಟಡಗಳ  ತ್ಯಾಜ್ಯ ಸಂಗ್ರಹಣ ಶುಲ್ಕವನ್ನು ಇದೀಗ  ಪರಿಷ್ಕರಿಸಲಾಗಿದೆ. ಅಧಿಕಾರಿಗಳ ಕ್ರಮವನ್ನು ಬಂಟ್ವಾಳ ಕ್ಷೇತ್ರ  ಬಿಜೆಪಿಯ ಸ್ವಾಗತಿಸುತ್ತಿದೆ ಎಂದು ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ತಿಳಿಸಿದ್ದಾರೆ.

ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೆಲವೊಂದು ಪ್ರದೇಶಗಳಲ್ಲಿ ತ್ಯಾಜ್ಯ ಸಂಗ್ರಹ ವ್ಯವಸ್ಥೆ ಇಲ್ಲದಿದ್ದು ಅಂತಹ ಪ್ರದೇಶಗಳ ಜನರು ವ್ಯವಸ್ಥೆ ಇಲ್ಲದಿದ್ದರೂ ಕಟ್ಟಡ ತೆರಿಗೆ ಪಾವತಿಯ ಜತೆ ತ್ಯಾಜ್ಯ ಸಂಗ್ರಹ ಶುಲ್ಕ ಪಾವತಿಸಬೇಕಾಗಿದೆ. ಈ ಬಗ್ಗೆಯೂ ಅಧಿಕಾರಿ ವರ್ಗ ಗಮನಹರಿಸ ಬೇಕಾಗಿ ಅವರು ವಿನಂತಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts