ಬಂಟ್ವಾಳ

ಲೋಕೋಪಯೋಗಿ ಇಲಾಖೆ ಬಂಟ್ವಾಳ ಎಇಇ ಅವರಿಗೆ ಬೀಳ್ಕೊಡುಗೆ

ಲೋಕೋಪಯೋಗಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ಭಟ್ ವೈ ಅವರನ್ನು ಮಂಗಳೂರು ವಿಶ್ವ ವಿದ್ಯಾನಿಲಯದ  ಕಾರ್ಯನಿರ್ವಾಹಕ ಅಭಿಯಂತರರಾಗಿ ಪದೋನ್ನತಿ ಹೊಂದಿದ ಬಂಟ್ವಾಳ ಉಪ ವಿಭಾಗದ ಲೋಕೋಪಯೋಗಿ ಕಚೇರಿಯಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಜಾಹೀರಾತು

ಸುಮಾರು 5 ವರ್ಷ ಬಂಟ್ವಾಳ ಲೋಕೋಪಯೋಗಿ ಇಲಾಖೆಯಲ್ಲಿ ಎ.ಇ.ಇ.ಯಾಗಿ ಸೇವೆ ಸಲ್ಲಿಸಿದ ಉಮೇಶ್ ಭಟ್ ಅವರು ಸಜ್ಜನ ಮತ್ತು ಸರಳ ಸ್ವಭಾವದ ಅಧಿಕಾರಿಯಾಗಿದ್ದು, ಸಾರ್ವಜನಿಕ ವಲಯದಲ್ಲಿ ಮಾದರಿಯಾದವರು. ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಸೇವೆ ಸಲ್ಲಿಸಿ ಜನಸ್ನೇಹಿಯಾಗಿದ್ದಾರೆ ಎಂದು ಪಂಚಾಯತ್ ರಾಜ್ ಇಂಜಿನಿಯರಿಂಗ್ ಬಂಟ್ವಾಳ ಉಪವಿಭಾಗದ ಎ.ಇ.ಇ. ರೋಹಿದಾಸ್ ಅವರು  ಶುಭ ಹಾರೈಸಿದರು.

ಲೋಕೋಪಯೋಗಿ ಇಲಾಖೆಯ ಪ್ರಭಾರ ಎ.ಇ.ಇ. ಅಮೃತ್ ಕುಮಾರ್ ಸಭಾಧ್ಯಕ್ಷತೆ ವಹಿಸಿದ್ದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖಾ ಉಪವಿಭಾಗದ ಮಹೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಂಟ್ವಾಳ ಉಪವಿಭಾಗದ ಇಂಜಿನಿಯರರಾದ ಪ್ರೀತಮ್, ರವೀಂದ್ರನಾಥ್ ಶೆಟ್ಟಿ, ಕೃಷ್ಣ, ಜಗದೀಶ್, ಅಜಿತ್, ಕುಶ ಕುಮಾರ್ ಉಪಸ್ಥಿತರಿದ್ದರು. ಇಂಜಿನಿಯರ್ ಅರುಣ್ ಪ್ರಕಾಶ್ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ