ವಾಮದಪದವು

ಗದ್ದೆ ಕಡೆಗೆ ನಡೆದರು ಅರ್ಥಶಾಸ್ತ್ರ ವಿದ್ಯಾರ್ಥಿಗಳು

ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲಿಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಗದ್ದೆಯಲ್ಲಿ ಬೀಜ ಬಿತ್ತುವ ಮೂಲಕ ಕೃಷಿ ಚಟುವಟಿಕೆಗಳ ಕುರಿತು ಪ್ರತ್ಯಕ್ಷ ವೀಕ್ಷಣೆ ನಡೆಸಿದರು.

ಜಾಹೀರಾತು

ಕಾಲೇಜಿನ ಸಮೀಪದ ಕಮಾಲಾಧರ ಶೆಟ್ಟಿಗಾರ್ ಗದ್ದೆಗೆ ತೆರಳಿ ವಿದ್ಯಾರ್ಥಿಗಳಿಗೆ ಬೀಜ ಬಿತ್ತನೆ ಮಾಡುವ ವಿಧಾನವನ್ನು ತಿಳಿಸಲಾಯಿತು.

 ಸ್ವತಃ ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಬಿತ್ತನೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳ ನಡಿಗೆ ಗದ್ದೆಯ ಕಡೆಗೆ ಎಂಬ ಘೋಷವಾಕ್ಯದಡಿ ಕೃಷಿಯಲ್ಲಿ ಜರಗುವ ಹಲವಾರು ಕಾರ್ಯಗಳಲ್ಲಿ ಮೊದಲನೆಯದಾದ ಭೂಮಿ ಉಳುವ ಹಾಗೂ ಬೀಜ ಬಿತ್ತುವ ವಿಧಾನವನ್ನು ತೋರಿಸಲಾಯಿತು. ಕೃಷಿಯಿಂದ ವಿಮುಕ್ತರಾಗುತ್ತಿರುವ ಯುವಜನತೆಗೆ ಮರಳಿ ಕೃಷಿಗೆ ಕರೆದುಕೊಂಡು ಹೋಗುವ ಪ್ರಯತ್ನವನ್ನು ಮಾಡಲಾಯಿತು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಸತ್ಯನಾರಾಯಣ ಭಟ್, ರಾಷ್ಟ್ರೀಯ ಸೇವಾಯೋಜನಾ ಘಟಕದ ಯೋಜನಾಧಿಕಾರಿಗಳಾದ ದೇವಿಪ್ರಸಾದ್ ಸಹಾಯಕ ಪ್ರಾಧ್ಯಾಪಕರು ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸೌಮ್ಯ ಹೆಚ್.ಕೆ , ಸುಮಾರು ೩೫ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ