ಸಾಹಿತಿ, ಸಹಕಾರಿ, ಪ್ರಗತಿಶೀಲ ಚಿಂತಕರಾಗಿದ್ದ ಡಾ. ಏರ್ಯ

ಸದಾ ಕೈಯಲ್ಲೊಂದು ಪುಸ್ತಕ, ಗಂಭೀರ ಮುಖಭಾವ, ಪರಿಚಯವಿದ್ದವರು ಕಂಡರೆ ಅವರನ್ನು ಆತ್ಮೀಯವಾಗಿ ಕೈಹಿಡಿದು ಪಕ್ಕದಲ್ಲಿ ಕೂರಿಸುವ ಹಿರಿಯರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಸಾಹಿತ್ಯ ಚಟುವಟಿಕೆಗಳಲ್ಲಿ ಸದಾ ತೊಡಗಿಸಿಕೊಂಡಿದ್ದ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಇನ್ನಿಲ್ಲ.

ಜಾಹೀರಾತು

ಅವರ ಮನೆ ಎಂದರೆ ಅದೊಂದು ಸಾಹಿತ್ಯದ ಭಂಡಾರ. 94ರ ವಯಸ್ಸಿನಲ್ಲೂ ಜಗತ್ತಿನ ಚಟುವಟಿಕೆಗಳನ್ನು ತಿಳಿಯುವ ಉತ್ಸಾಹ. ಬಿ.ಸಿ.ರೋಡಿಗೆ ತನ್ನ ವಾಹನದಲ್ಲಿ ಬಂದರೆ ಚಾಲಕನ ಬಳಿ ಎಲ್ಲಾ ಪತ್ರಿಕೆಗಳನ್ನೂ ಖರೀದಿಸಿ, ಕಾರಿನಲ್ಲಿಯೇ ಹೆಡ್ ಲೈನ್ ಓದುವ ಉತ್ಸಾಹ.

ಅವರ ಸಾಧನೆಗಳ ಕುರಿತು ಎರಡು ವರ್ಷಗಳ ಹಿಂದೆ ಬಂಟ್ವಾಳದಲ್ಲಿ ಕಾರ್ಯಕ್ರಮ ನಡೆದಿತ್ತು. ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಹಕಾರ, ಸಾಹಿತ್ಯ, ಸಂಘಟನೆ, ಸಮಾಜಸೇವೆ ಹೀಗೆ ಡಾ. ಏರ್ಯ ಅವರದ್ದು ಅವಿಶ್ರಾಂತ ದುಡಿಮೆ.

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮೊಡಂ ಕಾಪು ಬಳಿಯ ಏರ್ಯ ಬೀಡು ಮನೆಯಲ್ಲಿ ಜನಿಸಿದ ಅವರ ತಂದೆ ಮಾವಂತೂರ ಸುಬ್ಬಯ್ಯ ಆಳ್ವ, ತಾಯಿ ಸೋಮಕ್ಕೆ ಆಳ್ವ.

ಜುಲೈ 27ರ ಶನಿವಾರ ರಾತ್ರಿ 9.20ಕ್ಕೆ ಮಂಗಳೂರಿನ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಪತ್ನಿ ಆನಂದಿ ರೈ, ಪುತ್ರಿ ಸುಖದಾ ಅಳಿಯ ಬಾಲಕೃಷ್ಣ ಹೆಗ್ಡೆ ಮತ್ತು ಅಪಾರ ಬಂಧು, ಮಿತ್ರರು, ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ನಿಧನ ಹೊಂದುವ ವೇಳೆ ಅವರಿಗೆ 94 ವರ್ಷ ವಯಸ್ಸಾಗಿತ್ತು.

ಜಾನಪದ ಸೊಗಡಿನ ಕವಿ, ಸಹಕಾರ, ರಾಜಕೀಯ, ಸಾಹಿತ್ಯ, ಸಾಮಾಜಿಕ, ಶಿಕ್ಷಣ, ಧಾರ್ಮಿಕ, ಸಂಘಟನೆ, ನಾಟಕ, ಚಲನಚಿತ್ರ, ಯಕ್ಷಗಾನ ಕ್ಷೇತ್ರಗಳಲ್ಲಿ ಏರ್ಯ ತೊಡಗಿಸಿಕೊಂಡಿದ್ದರು. ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ, ಸ್ಥಳೀಯ ಗ್ರಾಪಂ ಅಧಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ನೂರಾರು ಲೇಖನ, ಕವನಗಳನ್ನು ಬರೆದಿದ್ದಾರೆ. ದ.ಕ.ಜಿಲ್ಲಾ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರೂ ಆಗಿದ್ದ ಅವರು, ಎಸ್. ಡಿಎಂ, ಎಸ್.ವಿ.ಎಸ್, ದೀಪಿಕಾ ಶಿಕ್ಷಣ ಸಂಸ್ಥೆಗಳ ಆಡಳಿತ ಸಮಿತಿಯಲ್ಲಿದ್ದವರು. ಜಾನಪದ ಟ್ರಸ್ಟ್, ವಿಹಿಂಪ, ನಾನಾ ಹಿರಿಯ ಸಾಹಿತಿಗಳ ಸಮಾವೇಶ ಸಂಘಟನೆ, ಭೂಮಿಕಾ ಮಂಗಳೂರು, ಮಂಗಳಾ ಫಿಲ್ಮ್ ಸೊಸೈಟಿ ಹೀಗೆ ಅವರ ಕ್ಷೇತ್ರ ವಿಸ್ತಾರ. ಸಹಜವಾಗಿಯೇ ಪ್ರಶಸ್ತಿಗಳು ಏರ್ಯರನ್ನು ಅರಸಿಕೊಂಡು ಬಂದಿವೆ.

ಜಾಹೀರಾತು

ಸಂತಾಪ: ಡಾ. ಏರ್ಯ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ.ರಮಾನಾಥ ರೈ,, ಫರಂಗಿಪೇಟೆ ಸೇವಾಂಜಲಿಯ ಟ್ರಸ್ಟಿ ಕೃಷ್ಣಕುಮಾರ ಪೂಂಜ ಸಹಿತ ಹಲವರು ಕಂಬನಿ ಮಿಡಿದಿದ್ದಾರೆ. ಅಂತ್ಯಸಂಸ್ಕಾರ ಏರ್ಯಬೀಡಿನಲ್ಲಿ ಭಾನುವಾರ ಸಂಜೆ 4 ಗಂಟೆಗೆ ನಡೆಯಲಿದೆ.

Editor: Harish Mambady www.bantwalnews.com

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಾಹಿತಿ, ಸಹಕಾರಿ, ಪ್ರಗತಿಶೀಲ ಚಿಂತಕರಾಗಿದ್ದ ಡಾ. ಏರ್ಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*