ಬಂಟ್ವಾಳ

ಎಸ್ಸೆಸ್ಸೆಫ್ ಮಂಚಿ ಸೆಕ್ಟರ್ ನಿಂದ ರಕ್ತದಾನ ಶಿಬಿರ

ಎಸ್ಸೆಸ್ಸೆಫ್ ಮಂಚಿ ಸೆಕ್ಟರ್ ವತಿಯಿಂದ ಜುಲೈ 28ರಂದು ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಕುಕ್ಕಾಜೆಯಲ್ಲಿ ರಕ್ತದಾನ ಶಿಬಿರ ನಡೆಯಿತು.

ಜಾಹೀರಾತು

ಅಧ್ಯಕ್ಷತೆಯನ್ನು ಸೆಕ್ಟರ್ ಅಧ್ಯಕ್ಷ ಅಸ್ಲಂ ಸಂಪಿಲ ವಹಿಸಿದ್ದರು. ವಹಿಸಿಕೊಂಡರು. ಅಸ್ಸಯ್ಯದ್ ಮುಶ್ತಾಕುರ್ರಹ್ಮಾನ್ ತಂಙಳ್ ಚಟ್ಟೆಕ್ಕಲ್ ದುಆಃ ಚಾಲನೆಗೈದು, ಅಬೂಬಕ್ಕರ್ ಲತೀಫಿ ಉಸ್ತಾದ್ ಎಣ್ಮೂರು ಉದ್ಘಾಟನೆಗೈದರು.

ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಎಂ.ಎಸ್ ಪ್ರಸನ್ನ ರಕ್ತದ ಅನಿವಾರ್ಯತೆ  ತುರ್ತಾಗಿ ಕಂಡುಬಂದಾಗ ರಕ್ತದ ಅವಶ್ಯಕತೆಗಾಗಿ ಕಷ್ಟಪಡುವ ಸನ್ನಿವೇಶವು ಈ ಹಿಂದೆ ಇದ್ದು, ಎಸ್ಸೆಸ್ಸೆಫ್ ನಂತಹ ಸಂಘಟನೆಯು ಸಮಯಕ್ಕೆ ಸರಿಯಾಗಿ ಶಿಬಿರ ನಡೆಸುವುದರಿಂದ ರಕ್ತದ ಕೊರತೆಯನ್ನು ನೀಗಿಸುವಲ್ಲಿ ಯಶಸ್ವಿಯಾಗಿರುತ್ತದೆ ಎಂದು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಮಂಚಿ ಸೆಕ್ಟರ್ ನಡೆಸುವ ರಕ್ತದಾನ ಶಿಬಿರ ಸಮಾಜಕ್ಕೆ ಮಾದರಿ ಎಂದು  ಇರಾ ಗ್ರಾಮ ಪಂಚಾಯತ್  ಅಧ್ಯಕ್ಷ ರಝಾಕ್ ಕುಕ್ಕಾಜೆ ಪ್ರಸ್ತಾವನೆಗೈದರು.

ಜಾಹೀರಾತು

ದ.ಕ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ, ಪ್ರ.ಕಾರ್ಯದರ್ಶಿ ಶರೀಫ್ ನಂದಾವರ, ಕಾರ್ಯದರ್ಶಿ ಜಮಾಲ್ ಸಖಾಫಿ, ಸದಸ್ಯರಾದ ಝೈನುಲ್ ಆಬಿದ್ ನಈಮಿ, ಬಂಟ್ವಾಳ ಡಿವಿಶನ್ ಅಧ್ಯಕ್ಷರಾದ ಅಕ್ಬರ್ ಅಲಿ ಮದನಿ,  ಎಂ.ಎಸ್ ಮುಹಮ್ಮದ್ , ಅಬ್ಬಾಸ್ ಅಲಿ, ಮಾಧವ ಮಾವೆ, ಅಬ್ದುಲ್ ರಹಿಮಾನ್ ಸಂಪಿಲ, ಕರೀಂ ಕದ್ಕಾರ್, ಅನ್ಸಾರ್ ಕಾರಾಜೆ, ಹಂಝ ಮಂಚಿ, ಜಾಬಿರ್ ಪಡ್ಪು ಉಪಸ್ಥಿತರಿದ್ದರು. ಸೆಕ್ಟರ್ ಪ್ರ.ಕಾರ್ಯದರ್ಶಿ ನೌಫಲ್ ಕಟ್ಟತ್ತಿಲ ಸ್ವಾಗತಿಸಿ, ಕಾರ್ಯದರ್ಶಿ ಲುಕುಮಾನ್ ಕುಕ್ಕಾಜೆ ಧನ್ಯವಾದ ನಡೆಸಿ, ಮಂಚಿ ಸೆಕ್ಟರ್ ಬ್ಲಡ್ ಸೈಬೋ ಉಸ್ತುವಾರಿ ಝುಬೈರ್ ಸಂಪಿಲ ನಿರೂಪಿಸಿ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ