ಬಂಟ್ವಾಳ

ಉರುಳಿದ ಮರ, ಪಾದಚಾರಿ ವಿದ್ಯಾರ್ಥಿನಿಗೆ ಗಾಯ

ಬಂಟ್ವಾಳದ ಕಾಮಾಜೆ ತಿರುವಿನಲ್ಲಿ ಸೋಮವಾರ ಮರವೊಂದು ಉರುಳಿಬಿದ್ದ ಪರಿಣಾಮ ಅದರ ರೆಂಬೆ ತಾಗಿ ವಿದ್ಯಾರ್ಥಿನಿಯೋರ್ವಳು ಗಾಯಗೊಂಡಿದ್ದಾಳೆ.

ಜಾಹೀರಾತು

ಕಾಮಾಜೆಗೆ ತಿರುಗುವ ಸ್ಥಳ ಬೋರುಗುಡ್ಡೆ ಎಂಬಲ್ಲಿ ನಡೆದುಕೊಂಡು ಹೋಗುವ ವೇಳೆ ಘಟನೆ ನಡೆದಿದೆ. ಕಾಮಾಜೆ ನಿವಾಸಿ ಸೇಸಪ್ಪ ಮೂಲ್ಯ ಅವರ ಮಗಳು ಶಾಲಿನಿ ಗಾಯಗೊಂಡ ವಿದ್ಯಾರ್ಥಿನಿ. ಅವರು ಬಿಸಿರೋಡಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಪ್ರಥಮ ಪಿ.ಯು.ಸಿ.ವಿದ್ಯಾರ್ಥಿನಿ.


ಮಾಹಿತಿ ತಿಳಿದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಅರ್.ಅವರು ಸ್ಥಳಕ್ಕೆ ಬೇಟಿ ನೀಡಿ ಅಗ್ನಿ ಶಾಮಕ ದಳ ಹಾಗೂ ಪೋಲೀಸರನ್ನು ಕರೆಸಿ ಮರ ತೆರವು ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರು

ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳವದವರು ಮರ ತೆರವು ಮಾಡಿದ್ದಾರೆ, ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ , ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು , ಗ್ರಾಮ ಲೆಕ್ಕಾಧಿಕಾರಿ ಶಿವನಂದ ನಾಟೆಕಾರ್, ಕುಮಾರ್ , ಸಿಬ್ಬಂದಿ ಶಿವ ಪ್ರಸಾದ್, ನಗರ ಠಾಣಾ ಎಸ್. ಐ ಚಂದ್ರಶೇಖರ್ ಹಾಗೂ ಸಿಬ್ಬಂದಿ ಗಳು ಬೇಟಿ ನೀಡಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.