ನರಹರಿ, ಕಾರಿಂಜ ಸನ್ನಿಧಿಯಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ

ಆಟಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ಕೇಂದ್ರಗಳಾದ ಕಾರಿಂಜ ಮತ್ತು ನರಹರಿ ಪರ್ವತಗಳಲ್ಲಿ  ನೂರಾರು ಮಂದಿ ಆಗಮಿಸಿ ತೀರ್ಥಸ್ನಾನ ಕೈಗೊಂಡರು.

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಚಿತ್ರಗಳು: ಕಿಶೋರ್ ಪೆರಾಜೆ

ಜಾಹೀರಾತು

ನರಹರಿ ಪರ್ವತ – ಚಿತ್ರ ಕಿಶೋರ್ ಪೆರಾಜೆ

ಕಾರಿಂಜ

ಕಾರಿಂಜ – ಚಿತ್ರ: ಕಿಶೋರ್ ಪೆರಾಜೆ

ನರಹರಿ ಪರ್ವತದಲ್ಲಿ ಶಾಸಕ ರಾಜೇಶ್ ನಾಯ್ಕ್

ಕಾರಿಂಜದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ

ನಸುಕಿನ ವೇಳೆಯೇ ಭಕ್ತರ ಸಾಲು ಕಂಡುಬಂತು. ಆಟಿ ಅಮಾವಾಸ್ಯೆ ಸಂದರ್ಭ ಇಲ್ಲಿನ ಪುಣ್ಯತೀರ್ಥಗಳ ಪವಿತ್ರ ಜಲದಲ್ಲಿ ಸ್ನಾನ ಮಾಡಿದರೆ, ಸರ್ವರೋಗ ಪರಿಹಾರವಾಗುತ್ತದೆ ಎಂಬ ನಂಬಿಕೆ ಇದದೆ. ಈ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಅಸುಪಾಸಿನ ಪರವೂರಿನ ಭಕ್ತರು ಜಾತಿ, ಧರ್ಮ ಬೇಧವಿಲ್ಲದೆ ಪರ್ವತವೇರಿ ಕೆರೆಗಳಲ್ಲಿ ಮಿಂದು ದೇವರ ಆಶೀರ್ವಾದ ಪಡೆದರು.

ನರಹರಿ ಪರ್ವತ ದೇವಸ್ಥಾನದಲ್ಲಿ ಡಾ. ಆತ್ಮರಂಜನ್ ರೈಯವರ ನೇತೃತ್ವದ  ಜೀರ್ಣೋದ್ದಾರ ಸಮಿತಿ ಹಾಗೂ ಆಡಳಿತ ಮೋಕ್ತೆಸರರಾದ ಡಾ. ಪ್ರಶಾಂತ ಮಾರ್ಲ ಹಾಗೂ ಆಡಳಿತ ಮಂಡಳಿ, ಜಿರ್ಣೋದ್ಧಾರ ಸಮಿತಿ ಸಕಲ ವ್ಯವಸ್ಥೆಗಳನ್ನು ಮಾಡಿತ್ತು.ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಆತ್ಮರಂಜನ ರೈ, ಆಡಳಿತ ಮೊಕ್ತೇಸರ ಡಾ. ಪ್ರಶಾಂತ್ ಮಾರ್ಲ ಉತ್ಸವ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಆಡಳಿತ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು, ಮಾಜಿ ಶಾಸಕ ಎ.ಪದ್ಮನಾಭ ಕೊಟ್ಟಾರಿ, ಜಿಪಂಎಂಜಿನಿಯರಿಂಗ್ ವಿಭಾಗದ ಎಇಇ ನರೇಂದ್ರಬಾಬು ಉಪಸ್ಥಿತರಿದ್ದರು.

ಬಂಟ್ವಾಳ ಪೊಲೀಸರು ಮತ್ತು ಗೃಹರಕ್ಷಕ ದಳದ ವತಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಯಿತು. ಕಾರಿಂಜ ದೇವಸ್ಥಾನದಲ್ಲಿ ಜಿನರಾಜ ಆರಿಗ ನೇತೃತ್ವದಲ್ಲಿ ಆಡಳಿತ ಸಮಿತಿ ಸಕಲ ವ್ಯವಸ್ಥೆಗಳನ್ನು ಮಾಡಿತ್ತು. ಮಾಜಿ ಸಚಿವ ಬಿ.ರಮಾನಾಥ ರೈ ಸಹಿತ ಹಲವು ಗಣ್ಯರು ಆಗಮಿಸಿ ದರ್ಶನ ಪಡೆದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನರಹರಿ, ಕಾರಿಂಜ ಸನ್ನಿಧಿಯಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*