ಬಂಟ್ವಾಳ

ತುಳುಕೂಟ ವತಿಯಿಂದ ಬಿ.ಸಿ.ರೋಡಿನಲ್ಲಿ ಕಷಾಯ ವಿತರಣೆ

ಆಟಿ ಅಮಾವಾಸ್ಯೆಯ ಪವಿತ್ರ ದಿನವಾದ ಆಗಸ್ಟ್ 1ರಂದು ಬಂಟ್ವಾಳ ತಾಲೂಕು ತುಳುಕೂಟ ವತಿಯಿಂದ ರಕ್ತೇಶ್ವರಿ ದೇವಿ ದೇವಸ್ಥಾನದ ಆಡಳಿತ ಮಂಡಳಿ ಸಹಕಾರದೊಂದಿಗೆ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ಸನ್ನಿಧಿಯಲ್ಲಿ ಪಾಲೆದ ಕೆತ್ತೆ ಕಷಾಯ ವಿತರಣೆ ಕಾರ್ಯಕ್ರಮ ಬೆಳಗ್ಗೆ ನಡೆಯಿತು.

ಜಾಹೀರಾತು

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತುಳುಕೂಟದ ಅಧ್ಯಕ್ಷ ಸುದರ್ಶನ ಜೈನ್ ಮಾತನಾಡಿ, ತುಳು ಸಂಸ್ಕೃತಿಯನ್ನು ಬಿಂಬಿಸುವ ಈ ಆಚರಣೆಗಳು ವೈಜ್ಞಾನಿಕವಾಗಿಯೂ ಮಹತ್ವ ಪಡೆದಿದ್ದು, ಆರೋಗ್ಯವರ್ಧನೆಗೂ ಕಷಾಯ ಸೇವನೆ ಸಹಕಾರಿಯಾಗಲಿದೆ ಎಂದರು.

ಬೆಳಗ್ಗೆ 6 ಗಂಟೆಯಿಂದ ಆರಂಭಗೊಂಡ ಈ ಕಾರ್ಯಕ್ರಮಕ್ಕೆ ಆಗಮಿಸಿದವರಿಗೆ ಕಷಾಯ ವಿತರಣೆ ಮಾಡಲಾಯಿತು. ತುಳುಕೂಟ ಕಾರ್ಯದರ್ಶಿ ಎಚ್. ಕೆ. ನಯನಾಡು, ರಕ್ತೇಶ್ವರಿ ದೇವಿ ದೇವಸ್ಥಾನದ ಸೇವಾ ಸಮಿತಿಯ ಪ್ರಮುಖರಾದ ರಾಜೇಶ್ ಎಲ್. ನಾಯಕ್, ಪ್ರಮುಖರಾದ ಶಿವಶಂಕರ್, ಮಚ್ಚೇಂದ್ರನಾಥ ಸಾಲಿಯಾನ್, ಪ್ರಕಾಶ್ ಶೆಟ್ಟಿ ಶ್ರೀಶೈಲ, ಸೇಸಪ್ಪ ಮಾಸ್ಟರ್, ನಾರಾಯಣ ಸಿ ಪೆರ್ನೆ, ಸೀತಾರಾಮ ಶೆಟ್ಟಿ ಕಾಂತಾಡಿಗುತ್ತು, ಸದಾಶಿವ ಪುತ್ರನ್, ಸುಕುಮಾರ್, ನೀಲೋಜಿರಾವ್, ಕೈಯೂರು ನಾರಾಯಣ ಭಟ್, ಕೆ.ಎಚ್.ಅಬೂಬಕ್ಕರ್, ದೇವಪ್ಪ ಕುಲಾಲ್ ಪಂಜಿಕಲ್ಲು ಮತ್ತಿತರರು ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ