ಬಂಟ್ವಾಳ

ಬಿಮೂಡ ಸರಕಾರಿ ಪಪೂ ಕಾಲೇಜಲ್ಲಿ ಜಲಜಾಗೃತಿ

ಅತ್ಯಧಿಕ ಮಳೆ ಬೀಳುವ ಭಾರತ ದೇಶದ ಬಹುತೇಕ ಸ್ಥಳಗಳಲ್ಲಿ ಜಲಕ್ಷಾಮ ವ್ಯಾಪಕವಾಗುತ್ತಿದ್ದು ಮಳೆ ನೀರು ಸಂರಕ್ಷಣೆ ಮಾಡುವುದೊಂದೇ ಇದಕ್ಕಿರುವ ಅಂತಿಮ ಪರಿಹಾರವೆಂದು ಉಡುಪಿಯ ಜಲತಜ್ಞ ಜೋಸೆಫ್ ರೆಬೆಲ್ಲೊ ಅಭಿಪ್ರಾಯ ಪಟ್ಟರು.

ಜಾಹೀರಾತು

ಬಿಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೋಡು ಮಾರ್ಗ ನೇತ್ರಾವತಿ ಜ್ಯೂನಿಯರ್ ಛೇಂಬರ್, ರೋಟರಿ ಕ್ಲಬ್ ಬಂಟ್ವಾಳ ನಗರ ಹಾಗೂ ಬಿಮೂಡ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಕಾಲೇಜಿನಲ್ಲಿ ನಡೆದ ಮಳೆನೀರು ಸಂರಕ್ಷಣೆ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಜೇಸೀ ಅಧ್ಯಕ್ಷ ಹರ್ಷರಾಜ್ , ರೋಟರಿ ಕ್ಲಬ್ ಬಂಟ್ವಾಳ ನಗರದ ಅಧ್ಯಕ್ಕ ಜಯರಾಜ್ ಬಂಗೇರ, ಎನ್.ಎಸ್.ಎಸ್ ಯೋಜನಾಧಿಕಾರಿ ಬಾಲಕೃಷ್ಣ ನಾಯ್ಕ ಕೆ ಉಪಸ್ಥಿತರಿದ್ದರು. ಕಾಲೇಜಿನ ಪ್ರಿನ್ಸಿಪಾಲ್  ಯೂಸುಫ್ ವಿಟ್ಲ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ದಾಮೋದರ್ ಇ ಸ್ವಾಗತಿಸಿ ಅಬ್ದುಲ್ ರಝಾಕ್ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ