ಗಮನಿಸಿ – ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಬದಲಿ ಸಂಚಾರ ವ್ಯವಸ್ಥೆ

ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪೆರಿಯಶಾಂತಿ ಯಿಂದ 3 ಕಿ.ಮೀ ದೂರದ ಎಂಜಿರ ಎಂಬಲ್ಲಿ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಒಂದು ಶುಕ್ರವಾರ ಮಗುಚಿಬಿದ್ದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮಂಗಳೂರು- ಗುಂಡ್ಯ ಮಧ್ಯೆ ಸಂಚರಿಸುವವರಿಗೆ ಬದಲಿ ಸಂಚಾರ ವ್ಯವಸ್ಥೆ ಮಾಡಿದೆ.

ಜಾಹೀರಾತು

ಎಂಜಿರದ ಮಲೆನಾಡು ಹೋಟೆಲ್ ಬಳಿ ಈ ಅಫಘಾತ ಇಂದು ಬೆಳಿಗ್ಗೆ 11,40 ರ ಅಂದಾಜಿಗೆ ನಡೆದಿದ್ದು, ಈ ಪ್ರದೇಶವು ಅಪಾಯಕಾರಿ ತಿರುವು ಮಾತ್ರವಲ್ಲದೆ ಹೊಂಡಗುಂಡಿಗಳಿಂದ ಕೂಡಿದ ಹೆದ್ದಾರಿಯಾಗಿ ಮಾರ್ಪಟ್ಟಿದ್ದು ಮಳೆಗಾಲದಲ್ಲಿ ನೀರು ನಿಂತು ಹೊಂಡವನ್ನು ಅಂದಾಜಿಸಲು ವಿಫಲವಾಗಿ ಅನೇಕ ಅಫಘಾತಗಳಿಗೆ ಎಡೆ ಮಾಡಿಕೊಡುವ ಸಾಧ್ಯತೆ ಇದೆ.

ರಾಷ್ಟ್ರೀಯ ಹೆದ್ದಾರಿ -75 ರಲ್ಲಿ ಘಟನೆ ನಡೆದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳಲು ಪರ್ಯಾಯ ಮಾರ್ಗವಾಗಿ ಗುಂಡ್ಯ – ಸುಬ್ರಮಣ್ಯ – ಕಡಬ – ಉಪ್ಪಿನಂಗಡಿ ಮಾರ್ಗ ಹಾಗೂ  ಮಂಗಳೂರಿನಿಂದ ಬೆಂಗಳೂರಿಗೆ ತೆರಳಲು ಉಪ್ಪಿನಂಗಡಿ – ಸುಬ್ರಮಣ್ಯ ಕ್ರಾಸ್ – ಕಡಬ – ಸುಬ್ರಮಣ್ಯ – ಗುಂಡ್ಯ ಮಾರ್ಗವನ್ನು ಬಳಸಬೇಕಾಗಿ ಪೊಲೀಸರು ಸೂಚನೆ ನೀಡಿದ್ದಾರೆ.

www.bantwalnews.com Editor: Harish Mambady

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಗಮನಿಸಿ – ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಬದಲಿ ಸಂಚಾರ ವ್ಯವಸ್ಥೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*