ಪ್ರಮುಖ ಸುದ್ದಿಗಳು

ಗಮನಿಸಿ – ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಬದಲಿ ಸಂಚಾರ ವ್ಯವಸ್ಥೆ

ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪೆರಿಯಶಾಂತಿ ಯಿಂದ 3 ಕಿ.ಮೀ ದೂರದ ಎಂಜಿರ ಎಂಬಲ್ಲಿ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಒಂದು ಶುಕ್ರವಾರ ಮಗುಚಿಬಿದ್ದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮಂಗಳೂರು- ಗುಂಡ್ಯ ಮಧ್ಯೆ ಸಂಚರಿಸುವವರಿಗೆ ಬದಲಿ ಸಂಚಾರ ವ್ಯವಸ್ಥೆ ಮಾಡಿದೆ.

ಜಾಹೀರಾತು

ಎಂಜಿರದ ಮಲೆನಾಡು ಹೋಟೆಲ್ ಬಳಿ ಈ ಅಫಘಾತ ಇಂದು ಬೆಳಿಗ್ಗೆ 11,40 ರ ಅಂದಾಜಿಗೆ ನಡೆದಿದ್ದು, ಈ ಪ್ರದೇಶವು ಅಪಾಯಕಾರಿ ತಿರುವು ಮಾತ್ರವಲ್ಲದೆ ಹೊಂಡಗುಂಡಿಗಳಿಂದ ಕೂಡಿದ ಹೆದ್ದಾರಿಯಾಗಿ ಮಾರ್ಪಟ್ಟಿದ್ದು ಮಳೆಗಾಲದಲ್ಲಿ ನೀರು ನಿಂತು ಹೊಂಡವನ್ನು ಅಂದಾಜಿಸಲು ವಿಫಲವಾಗಿ ಅನೇಕ ಅಫಘಾತಗಳಿಗೆ ಎಡೆ ಮಾಡಿಕೊಡುವ ಸಾಧ್ಯತೆ ಇದೆ.

ರಾಷ್ಟ್ರೀಯ ಹೆದ್ದಾರಿ -75 ರಲ್ಲಿ ಘಟನೆ ನಡೆದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳಲು ಪರ್ಯಾಯ ಮಾರ್ಗವಾಗಿ ಗುಂಡ್ಯ – ಸುಬ್ರಮಣ್ಯ – ಕಡಬ – ಉಪ್ಪಿನಂಗಡಿ ಮಾರ್ಗ ಹಾಗೂ  ಮಂಗಳೂರಿನಿಂದ ಬೆಂಗಳೂರಿಗೆ ತೆರಳಲು ಉಪ್ಪಿನಂಗಡಿ – ಸುಬ್ರಮಣ್ಯ ಕ್ರಾಸ್ – ಕಡಬ – ಸುಬ್ರಮಣ್ಯ – ಗುಂಡ್ಯ ಮಾರ್ಗವನ್ನು ಬಳಸಬೇಕಾಗಿ ಪೊಲೀಸರು ಸೂಚನೆ ನೀಡಿದ್ದಾರೆ.

www.bantwalnews.com Editor: Harish Mambady

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.