ಜಿಲ್ಲಾ ಸುದ್ದಿ

ಭಾರಿ ಮಳೆ – ಘಾಟಿ ರಸ್ತೆ ಸಂಚಾರಿಗಳ ಗಮನಕ್ಕೆ

  • ಚಾರ್ಮಾಡಿ, ಶಿರಾಡಿಯಲ್ಲಿ ಡೇಂಜರ್, ಅನಿವಾರ್ಯವಾದರಷ್ಟೇ ಪ್ರವಾಸ ತೆರಳಿ

ದಕ್ಷಿಣ ಕನ್ನಡ ಜಿಲ್ಲೆಗೆ ಈಗ ಪ್ರವಾಸಕ್ಕೇನಾದರೂ ಶಿರಾಡಿ, ಚಾರ್ಮಾಡಿ ಘಾಟಿಯಲ್ಲಿ ಬರುವುದಾದರೆ ಒಂದೆರಡು ದಿನಗಳ ಮಟ್ಟಿಗೆ ಮುಂದೂಡುವುದು ಒಳ್ಳೆಯದು. ಭಾರಿ ಮಳೆ ರಸ್ತೆ ಸಂಚಾರಿಗಳಿಗೆ ಅಪಾಯವನ್ನು ತಂದೊಡ್ಡಿದೆ.

ಜಾಹೀರಾತು

ಮಂಗಳೂರು ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ಸದ್ಯಕ್ಕೆ ರಸ್ತೆ ಸಂಚಾರಕ್ಕೆ ತೊಂದರೆ ಇಲ್ಲವಾದರೂ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಸಂಚರಿಸುವವರು ಮುಂದಕ್ಕೆ ರಸ್ತೆ ಸರಿಯಾಗಿದೆಯೋ ಎಂದು ಗಮನಿಸಿಯೇ ಹೊರಡಬೇಕು.

ಮಂಗಳವಾರ ಬೆಳಗ್ಗೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ 7-8ನೇ ತಿರುವಿನಲ್ಲಿ ರಸ್ತೆಗೆ ಮರ ಬಿದ್ದು ಎರಡು ಗಂಟೆ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಬಳಿಕ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು. ಅದಾದ ಬಳಿಕ 9-8 ನೇ ತಿರುವಿನ ಹಾಗೂ 2-3 ನೇ ತಿರುವಿನ ಮಧ್ಯೆ ಕುಸಿತವಾದ ಕಡೆ ಜೆಸಿಬಿ ಮೂಲಕ‌ ತೆರವು ಕಾರ್ಯ ನಡೆಯಿತು.

ಸಕಲೇಶಪುರದಲ್ಲಿ ಮಳೆಯಾಗುತ್ತಿರುವ ಕಾರಣ, ಶಿರಾಡಿ ಘಾಟಿಯಲ್ಲೂ ಮಣ್ಣು ರಸ್ತೆಗೆ ಕುಸಿದು ಬೀಳುವ ಅಪಾಯಗಳೂ ಇವೆ. ಸದ್ಯಕ್ಕಂತೂ ವಾಹನಗಳು ಇಲ್ಲಿ ಓಡಾಡುತ್ತಿದ್ದು, ಗ್ಯಾರಂಟಿ ಹೇಳಲಾಗುವುದಿಲ್ಲ.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ