ಪ್ರಮುಖ ಸುದ್ದಿಗಳು

ಕರಾವಳಿಯಲ್ಲಿ ಅಬ್ಬರದ ಮಳೆ, ಅಲ್ಲಲ್ಲಿ ಹಾನಿ, ನೆರೆಭೀತಿ

ಬಂಟ್ವಾಳನ್ಯೂಸ್ ವರದಿ 

www.bantwalnews.com

ಜಾಹೀರಾತು

ಮಂಗಳವಾರ ಮಂಗಳೂರು, ಬಂಟ್ವಾಳ ಸಹಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಆಗಸ್ಟ್ 7,8ರಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಘಿದೆ. ಸುಬ್ರಹ್ಮಣ್ಯ ಸ್ನಾನಘಟ್ಟ ಜಲಾವೃತವಾಗಿದ್ದರೆ, ಇತರ ತೀರ್ಥಕ್ಷೇತ್ರಗಳಲ್ಲೂ ಮಳೆ ಸುರಿಯುತ್ತಿದೆ. ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಮಂಗಳೂರು ಸಹಿತ ಎಲ್ಲೆಡೆ ಮಳೆಯದ್ದೇ ಸದ್ದು. ಕಡಲತೀರದಲ್ಲಿ ಸಮುದ್ರದಬ್ಬರವೂ ಹೆಚ್ಚಾಗಿದ್ದು, ತೀರ ಪ್ರದೇಶದ ಜನರಿಗೆ ಭೀತಿ ಎದುರಾಗಿದೆ. ಮಂಗಳೂರಿನ ಮುಡಿಪು, ಬಂಟ್ವಾಳ ತಾಲೂಕಿನ ಕೆದಿಲ, ಮಂಚಿ, ಕುಡ್ತಮುಗೇರು ಸಹಿತ ಹಲವೆಡೆ ಹಾನಿಗಳು ಸಂಭವಿಸಿವೆ

ಚಾರ್ಮಾಡಿ ಘಾಟಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿದ್ದರೂ ಅದನ್ನು ಈಗ ತೆರವುಗೊಳಿಸಲಾಗಿದೆ. ಶಿರಾಡಿ ರಸ್ತೆಯೂ ಅಪಾಯಮುಕ್ತವಾಗಿಲ್ಲ. ಕೊಡಗಿನಲ್ಲೂ ಮಳೆಯಾಗುತ್ತಿದ್ದು, ಅಲ್ಲೂ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬಂಟ್ವಾಳ ಸಮೀಪ ಕಾಡಬೆಟ್ಟು

ಘಟ್ಟ ಪ್ರದೇಶದಲ್ಲೂ ಮಳೆಯಾಗುತ್ತಿರುವ ಕಾರಣ ನೇತ್ರಾವತಿ ಯಾವುದೇ ಕ್ಷಣದಲ್ಲೂ ಅಪಾಯದ ಮಟ್ಟದಷ್ಟು ತಲುಪುವ ಸಾಧ್ಯತೆ ಇದೆ. ಭಾರೀ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ತಹಶೀಲ್ದಾರ್ ರಶ್ಮಿ ಎಸ್.ಆರ್. ರಜೆ ಘೋಷಣೆ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ಅಂಗನವಾಡಿ,ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ರಜೆ ನೀಡುವಂತೆ ಬಂಟ್ವಾಳ ಶಿಕ್ಷಣಾಧಿಕಾರಿಗೆ ಸೂಚನೆ ನೀಡಿದ್ದಾರೆ. ಸೋಮವಾರ ರಾತ್ರಿ 5.8 ಮೀಟರ್ ನಷ್ಟು ಎತ್ತರದಲ್ಲಿ ಹರಿಯುತ್ತಿದ್ದ ನೇತ್ರಾವತಿ, ಮಂಗಳವಾರ ಬೆಳಗ್ಗೆ 7.8 ಮೀಟರ್ ತಲುಪಿತ್ತು.  ಮಧ್ಯಾಹ್ನದ ವೇಳೆ ಇಳಿಮುಖವಾಗಿದ್ದು, 7.4ರಲ್ಲಿತ್ತು. ಮಟ್ಟ 8.5 ಆಗಿದೆ. ಶಂಭೂರು ಎಎಂಆರ್ ಅಣೆಕಟ್ಟಿನಿಂದ ಹತ್ತು ಗೇಟ್ ಗಳಲ್ಲಿ ನೀರನ್ನು ಹೊರಬಿಡಲಾಗಿದೆ.

www.bantwalnews.com Editor: Harish Mambady

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.