ಪ್ರಮುಖ ಸುದ್ದಿಗಳು

ಕರಾವಳಿಯಲ್ಲಿ ಅಬ್ಬರದ ಮಳೆ, ಅಲ್ಲಲ್ಲಿ ಹಾನಿ, ನೆರೆಭೀತಿ

ಬಂಟ್ವಾಳನ್ಯೂಸ್ ವರದಿ 

www.bantwalnews.com

ಜಾಹೀರಾತು

ಮಂಗಳವಾರ ಮಂಗಳೂರು, ಬಂಟ್ವಾಳ ಸಹಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಆಗಸ್ಟ್ 7,8ರಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಘಿದೆ. ಸುಬ್ರಹ್ಮಣ್ಯ ಸ್ನಾನಘಟ್ಟ ಜಲಾವೃತವಾಗಿದ್ದರೆ, ಇತರ ತೀರ್ಥಕ್ಷೇತ್ರಗಳಲ್ಲೂ ಮಳೆ ಸುರಿಯುತ್ತಿದೆ. ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಮಂಗಳೂರು ಸಹಿತ ಎಲ್ಲೆಡೆ ಮಳೆಯದ್ದೇ ಸದ್ದು. ಕಡಲತೀರದಲ್ಲಿ ಸಮುದ್ರದಬ್ಬರವೂ ಹೆಚ್ಚಾಗಿದ್ದು, ತೀರ ಪ್ರದೇಶದ ಜನರಿಗೆ ಭೀತಿ ಎದುರಾಗಿದೆ. ಮಂಗಳೂರಿನ ಮುಡಿಪು, ಬಂಟ್ವಾಳ ತಾಲೂಕಿನ ಕೆದಿಲ, ಮಂಚಿ, ಕುಡ್ತಮುಗೇರು ಸಹಿತ ಹಲವೆಡೆ ಹಾನಿಗಳು ಸಂಭವಿಸಿವೆ

ಚಾರ್ಮಾಡಿ ಘಾಟಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿದ್ದರೂ ಅದನ್ನು ಈಗ ತೆರವುಗೊಳಿಸಲಾಗಿದೆ. ಶಿರಾಡಿ ರಸ್ತೆಯೂ ಅಪಾಯಮುಕ್ತವಾಗಿಲ್ಲ. ಕೊಡಗಿನಲ್ಲೂ ಮಳೆಯಾಗುತ್ತಿದ್ದು, ಅಲ್ಲೂ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬಂಟ್ವಾಳ ಸಮೀಪ ಕಾಡಬೆಟ್ಟು

ಘಟ್ಟ ಪ್ರದೇಶದಲ್ಲೂ ಮಳೆಯಾಗುತ್ತಿರುವ ಕಾರಣ ನೇತ್ರಾವತಿ ಯಾವುದೇ ಕ್ಷಣದಲ್ಲೂ ಅಪಾಯದ ಮಟ್ಟದಷ್ಟು ತಲುಪುವ ಸಾಧ್ಯತೆ ಇದೆ. ಭಾರೀ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ತಹಶೀಲ್ದಾರ್ ರಶ್ಮಿ ಎಸ್.ಆರ್. ರಜೆ ಘೋಷಣೆ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ಅಂಗನವಾಡಿ,ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ರಜೆ ನೀಡುವಂತೆ ಬಂಟ್ವಾಳ ಶಿಕ್ಷಣಾಧಿಕಾರಿಗೆ ಸೂಚನೆ ನೀಡಿದ್ದಾರೆ. ಸೋಮವಾರ ರಾತ್ರಿ 5.8 ಮೀಟರ್ ನಷ್ಟು ಎತ್ತರದಲ್ಲಿ ಹರಿಯುತ್ತಿದ್ದ ನೇತ್ರಾವತಿ, ಮಂಗಳವಾರ ಬೆಳಗ್ಗೆ 7.8 ಮೀಟರ್ ತಲುಪಿತ್ತು.  ಮಧ್ಯಾಹ್ನದ ವೇಳೆ ಇಳಿಮುಖವಾಗಿದ್ದು, 7.4ರಲ್ಲಿತ್ತು. ಮಟ್ಟ 8.5 ಆಗಿದೆ. ಶಂಭೂರು ಎಎಂಆರ್ ಅಣೆಕಟ್ಟಿನಿಂದ ಹತ್ತು ಗೇಟ್ ಗಳಲ್ಲಿ ನೀರನ್ನು ಹೊರಬಿಡಲಾಗಿದೆ.

ಜಾಹೀರಾತು

www.bantwalnews.com Editor: Harish Mambady

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ