ಬಂಟ್ವಾಳ

ಮಳೆ ಇಳಿಮುಖ, ನೇತ್ರಾವತಿ ನೀರಿನ ಮಟ್ಟ ಏರಿಳಿತ

ಚಿತ್ರ: ಎಸ್.ಆರ್. ಕೈಕಂಬ

ಬಂಟ್ವಾಳ ಸುತ್ತಮುತ್ತ ಬುಧವಾರ ಮಳೆ ಕಡಿಮೆ ಇತ್ತು. ಆದರೆ ಜೋರಾದ ಗಾಳಿ ಬೀಸಿದ ಕಾರಣ ಕೆಲವೆಡೆ ಅವಘಡಗಳು ಸಂಭವಿಸಿವೆ. ಘಟ್ಟ ಪ್ರದೇಶದಲ್ಲಿ ಮಳೆಯಾಗಿರುವ ಕಾರಣ ನೇತ್ರಾವತಿ ನೀರಿನ ಮಟ್ಟದಲ್ಲಿ ಆಗಾಗ್ಗೆ ಏರಿಳಿತ ಕಂಡುಬಂತು. ತುಂಬೆ ಅಣೆಕಟ್ಟಿನಲ್ಲಿ ನೀರಿನ ಮಟ್ಟ 7 ಮೀಟರ್ ಮಧ್ಯಾಹ್ನ 1 ಗಂಟೆಗೆ ಇತ್ತು.

ಜಾಹೀರಾತು

ತುಂಬೆ – ಆ.7, ಮಧ್ಯಾಹ್ನ

ಕಡೇಶಿವಾಲಯದ ದೃಶ್ಯ

 

 

ಜಾಹೀರಾತು

 

ನೇತ್ರಾವತಿ ನದಿ ನೀರಿನ ಮಟ್ಟ ಬೆಳಗ್ಗೆ 8.4 ಇದ್ದರೆ, ಮಧ್ಯಾಹ್ನ 1 ಗಂಟೆಗೆ 8.2 ಇತ್ತು. ಅಪಾಯದ ಮಟ್ಟ 8.5 ಆಗಿದ್ದು, ಯಾವುದೇ ಕ್ಷಣದಲ್ಲಿ ಅಪಾಯದ ಮಟ್ಟ ತಲುಪಬಹುದು ಎನ್ನಲಾಗಿದೆ.

ಕಡೇಶಿವಾಲಯ, ಅಜಿಲಮೊಗರು ಮಧ್ಯೆ ಹರಿಯುವ ನೇತ್ರಾವತಿ ನದಿಯಲ್ಲಿ ನೀರಿನ ಏರಿಕೆಯಾದ ಕಾರಣ ಅಜಿಲಮೊಗರು ಮಸೀದಿ ಬಳಿ ನೀರು ಉಕ್ಕಿ ಹರಿದರೆ, ಸಮೀಪದ ರಸ್ತೆಯಲ್ಲೆಲ್ಲಾ ನದಿ ನೀರು ಹರಿಯಿತು. ಕಡೇಶಿವಾಲಯ ದೇವಸ್ಥಾನದ ಸನಿಹವೂ ನದಿ ನೀರು ಬಂದಿದೆ. ಪ್ರತಿ ವರ್ಷ ಮಳೆ ಬಂದಾಗ ಸಮಸ್ಯೆಯಾಗುವ ಪಾಣೆಮಂಗಳೂರಿನ ಆಲಡ್ಕ, ಬಂಟ್ವಾಳದ ಬಡ್ಡಕಟ್ಟೆ, ಜಕ್ರಿಬೆಟ್ಟು ಪ್ರದೇಶಗಳಲ್ಲಿ ಬುಧವಾರವೂ ನೀರು ನುಗ್ಗಿದ್ದು, ಮೊದಲೇ ಮುಂಜಾಗರೂಕತಾ ಕ್ರಮ ಕೈಗೊಂಡ ಕಾರಣ ಯಾರಿಗೂ ಅಪಾಯವಾಗಿಲ್ಲ.

ಜಾಹೀರಾತು

ಮೆಸ್ಕಾಂ ಸಿಬ್ಬಂದಿಗೆ ಶ್ಲಾಘನೆ: ಸಾಮಾನ್ಯವಾಗಿ ಮಳೆ ಬಂದಾಗ ವಿದ್ಯುತ್ ಕೈಕೊಡುವುದು ವಾಡಿಕೆ. ಆದರೆ ಈ ಬಾರಿ ಮೆಸ್ಕಾಂ ಸಿಬ್ಬಂದಿ ವಿದ್ಯುತ್ ವಯರುಗಳಿಗೆ ಗೆಲ್ಲು ಬೀಳುವುದು ಅಥವಾ ಇನ್ನಿತರ ಸಮಸ್ಯೆಗಳಿದ್ದಾಗ, ಗಾಳಿ ಮಳೆಗೇ ಸ್ಥಳಕ್ಕೆ ತೆರಳಿ ದುರಸ್ತಿ ಕ್ರಮ ಕೈಗೊಂಡಿರುವುದು ಶ್ಲಾಘನೆಗೆ ಒಳಗಾಗಿದೆ.

www.bantwalnews.com Editor: Harish Mambady

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ