ಬಂಟ್ವಾಳ ಪುರಸಭೆಯಲ್ಲಿ ವಾಸದ ಮನೆ ಮತ್ತು ವಾಣಿಜ್ಯ ಕಟ್ಟಡಗಳ ತೆರಿಗೆ ಪಾವತಿಯ ಸಂದರ್ಭದಲ್ಲಿ ಕಸ ಸಂಗ್ರಹಣೆ ಹೆಸರಿನಲ್ಲಿ ಹೆಚ್ಚುವರಿ ಶುಲ್ಕ ವಸೂಲು ಮಾಡುವುದರ ವಿರುದ್ಧ ಕಾಂಗ್ರೆಸ್ ನಿಯೋಗ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಭೇಟಿಯಾಗಿ ಮನವ ಸಲ್ಲಿಸಿದೆ.
ಈ ಸಂದರ್ಭ ಮಾತನಾಡಿದ ರೈ, ತೀರಾ ಜನವಿರೋಧಿ ಕ್ರಮವಾಗಿದೆ. ಕಸ ಸಂಗ್ರಹಣೆಯ ಸೇವೆಯನ್ನು ಬಳಸದಿರುವ ನಗರವಾಸಿಗಳಿಗೆ ತೆರಿಗೆ ಪಾವತಿಸಲು ಒತ್ತಾಯ ಹೇರುತ್ತಿರುವ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದುದರಿಂದ ಕಸ ಸಂಗ್ರಹಣಾ ತೆರಿಗೆ ವಸೂಲು ಮಾಡುವುದನ್ನು ಪುರಸಭೆಯ ಚುನಾಯಿತ ಪ್ರತಿನಿಧಿಗಳ ಆಡಳಿತ ಬರುವ ತನಕ ತಕ್ಷಣದಿಂದ ತಡೆಹಿಡಿಯುವಂತೆ ಒತ್ತಾಯಿಸಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯಾತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ಪುರಸಭೆ ಸದಸ್ಯರಾದ ಮಹಮ್ಮದ್ ನಂದರಬೆಟ್ಟು., ಜನಾರ್ದನ ಚೆಂಡ್ತಿಮಾರ್ ,ಮಹಮ್ಮದ್ ಶೆರೀಫ್, ಲೋಲಾಕ್ಷ ಶೆಟ್ಟಿ, ಗಂಗಾಧರ ಪೂಜಾರಿ, ಮುಖಂಡರಾದ ಶಬೀರ್ ಸಿದ್ದಕಟ್ಟೆ ಉಪಸ್ಥಿತರಿದ್ದರು.
Be the first to comment on "ತ್ಯಾಜ್ಯ ಅಡ್ವಾನ್ಸ್ ಶುಲ್ಕ ವಿರೋಧಿಸಿ ಕಾಂಗ್ರೆಸ್ ನಿಂದ ಜಿಲ್ಲಾಧಿಕಾರಿಗೆ ಮನವಿ"